ನಗರದ ಜ್ಞಾನಭಾರತಿ ಪೊಲೀಸರು ಕಿರುತೆರೆ ನಟ, ರಿಯಾಲಿಟಿ ಶೋ ಸ್ಪರ್ಧಿ ಸುನಾಮಿ ಕಿಟ್ಟಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ನಗರದ ಜ್ಞಾನಭಾರತಿ ಪೊಲೀಸರು ಕಿರುತೆರೆ ನಟ, ಬಿಗಾ ಬಾಸ್ ಹಾಗೂ ಇತರೆ ರಿಯಾಲಿಟಿ ಶೋ ಸ್ಪರ್ಧಿ ಸುನಾಮಿ ಕಿಟ್ಟಿಯನ್ನು ಬಂಧಿಸಿದ್ದಾರೆ.
Add Asianetnews Kannada as a Preferred Source

ಕಿಟ್ಟಿಯನ್ನು ಅಪಹರಣ, ಕೊಲೆ ಬೆದರಿಕೆ ಪ್ರಕರಣದಡಿ ಬಂಧಿಸಲಾಗಿದೆ.
ರೆಸ್ಟೋರೆಂಟ್ವೊಂದರಲ್ಲಿ ಸಪ್ಲೈಯರ್ ಗಿರೀಶ್ ಎಂಬುವವರಿಗೆ ಗನ್ ತೋರಿಸಿ, ಬೆದರಿಸಿರುವುದಾಗಿ ಪ್ರಕರಣವೊಂದು ದಾಖಲಾಗಿತ್ತು. ಹಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ದೂರು ದಾಖಲಾಗಿತ್ತು. ಇದೀಗ ಕಿಟ್ಟಿಯೊಂದಿಗೆ ಯೋಗೇಂದ್ರ, ಅರ್ಜುನ ಎಂಬುವವರನ್ನು ಬಂಧಿಸಲಾಗಿದೆ.
ಜ್ಞಾನಭಾರತಿ ಪೊಲೀಸರು ತನಿಕೆ ಮುಂದುವರಿಸಿದ್ದಾರೆ.
