ಶಾಸಕ ಹ್ಯಾರಿಸ್ ಮಗನಿಂದ ನಡೆದ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಂಡಲ ಅಧ್ಯಕ್ಷ ವಾಸುದೇವ್ ಮೂರ್ತಿ ಪ್ರತಿಕ್ರಿಯಿಸಿದ್ದಾರೆ. ಇದೊಂದು ದೌರ್ಜನ್ಯವಾಗಿದೆ. ಶಾಂತಿನಗರ ಕ್ಷೇತ್ರ ರೌಡಿಸಂ ಕ್ಷೇತ್ರವಾಗಿದೆ. ಗಾಂಜಾ ಹಾವಳಿ ವಿಪರೀತವಾಗಿದೆ.

ಬೆಂಗಳೂರು : ಶಾಸಕ ಹ್ಯಾರಿಸ್ ಮಗನಿಂದ ನಡೆದ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಂಡಲ ಅಧ್ಯಕ್ಷ ವಾಸುದೇವ್ ಮೂರ್ತಿ ಪ್ರತಿಕ್ರಿಯಿಸಿದ್ದಾರೆ. ಇದೊಂದು ದೌರ್ಜನ್ಯವಾಗಿದೆ. ಶಾಂತಿನಗರ ಕ್ಷೇತ್ರ ರೌಡಿಸಂ ಕ್ಷೇತ್ರವಾಗಿದೆ. ಗಾಂಜಾ ಹಾವಳಿ ವಿಪರೀತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೊಲೀಸರಿಗೆ ದೂರನ್ನು ನೀಡಿದರೂ ತೆಗೆದುಕೊಳ್ಳಲ್ಲ. ದೂರು ಕೊಟ್ಟವರ ಮೇಲೆಯೇ ಕ್ರಮ ಕೈಗೊಳ್ಳುತ್ತಾರೆ. ಹ್ಯಾರಿಸ್ ಮಗನದ್ದೊಂದೆ ಪ್ರಕರಣವಲ್ಲ ಎಂದು ಹೇಳಿದ್ದಾರೆ. 

ಇಲ್ಲಿ ಅನೇಕ ರೀತಿಯ ಗಲಾಟೆ ನಡೆದಿವೆ. ಬೌರಿಂಗ್ ಇನ್ಸ್ಟಿಟ್ಯೂಟ್ ಗಲಾಟೆ, ರಿಚ್ಮಂಡ್ ಹೋಟೆಲ್ ಗಲಾಟೆ ಇರಬಹುದು ಯಾವುದೇ ದೂರು ದಾಖಲಾಗುವುದಿಲ್ಲ. ಸಂಜೆ 6 ಗಂಟೆಯೊಳಗೆ ನಲಪಾಡ್ ಬಂಧಿಸಿಲ್ಲ ಎಂದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೇ ಪೊಲೀಸರು ಎಲ್ಲರೂ ಅವರ ಚೇಲಾಗಳಾಗಿದ್ದಾರೆ. ಅವರ ಪರವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.