ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ಧತೆ| ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ಶಾಲೆಗಳ ವಿದ್ಯಾರ್ಥಿಗಳು ವಸತಿ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗ ಮುಂದುವರೆಸಿ, ಕೀರ್ತಿ ತರಬೇಕು: ಡಿಸಿಎಂ ಗೋವಿಂದ ಕಾರಜೋಳ|

ಬೆಂಗಳೂರು(ಜು.20): ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದ್ದು, ವಸತಿ ಕಾಲೇಜುಗಳ ಪ್ರವೇಶಕ್ಕೆ ಕೇಂದ್ರೀಕೃತ ಆನ್‌ಲೈನ್ ಅರ್ಜಿ ಆಹ್ವಾನಿಸಲು ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಸೂಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕಿನ ನಡೆಯುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವು ಅತ್ಯುತ್ತಮವಾಗಿ ಬಂದಿದ್ದು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ 66 ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿದ್ಯಾರ್ಥಿಗಳು ಶೇ. 86.4 ರಷ್ಟು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರಲ್ಲಿ ಶೇ. 75.3 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. 1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಮತ್ತಿತರ ಪ್ರಮುಖ ವಿಷಯಗಳಲ್ಲಿ 72 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. 11 ಕಾಲೇಜುಗಳಲ್ಲಿ ಶೇ. 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವರ್ಷ​ದಲ್ಲಿ ವಿಜಯಪುರ ವಿಮಾ​ನ ನಿಲ್ದಾಣ ಪೂರ್ಣ: ಡಿಸಿಎಂ ಗೋವಿಂದ ಕಾರ​ಜೋ​ಳ

ಕಳೆದ ವರ್ಷ ಶೇ.76.4 ರಷ್ಟು ಫಲಿತಾಂಶ ಬಂದಿತ್ತು. ವಸತಿ ಕಾಲೇಜುಗಳ ಫಲಿತಾಂಶವು ರಾಜ್ಯದ ಒಟ್ಟಾರೆ ಪಿಯುಸಿ ಫಲಿತಾಂಶಕ್ಕಿಂತ ಶೇ. 25. ರಷ್ಟು ಹೆಚ್ಚಳವಾಗಿದೆ. ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ಶಾಲೆಗಳ ವಿದ್ಯಾರ್ಥಿಗಳು ವಸತಿ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗ ಮುಂದುವರೆಸಿ, ಕೀರ್ತಿ ತರಬೇಕು ಎಂದು ತಿಳಿಸಿದ್ದಾರೆ.