ಇಂಗ್ಲಿಷ್ ಎಕ್ಸಾಂಗೂ ಮುನ್ನ ಅಸುನೀಗಿದವನಿಗೆ ಶೇ.90 ಅಂಕ| ಹೃದಯಾಘಾತದಿಂದ ಅಸುನೀಗಿದ್ದ ವಿಜಯಪುರದ ವಿದ್ಯಾರ್ಥಿ|
ವಿಜಯಪುರ(ಜು.16): ಹೃದಯಾಘಾತದಿಂದ ಅಸುನೀಗಿದ್ದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮದ ರಕ್ಷಿತ್(18) ಎಂಬ ಅಂಧ ವಿದ್ಯಾರ್ಥಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಐದು ವಿಷಯಗಳಲ್ಲಿ ಶೇ.90ರಷ್ಟುಅಂಕ ಗಳಿಸಿದ್ದಾನೆ. ಆದರೆ, ದುರಾದೃಷ್ಟಎಂಬಂತೆ ತಂದೆ-ತಾಯಿ, ಸ್ನೇಹಿತರು ಈ ಫಲಿತಾಂಶದ ಖುಷಿಯನ್ನು ಹಂಚಿಕೊಳ್ಳಲು ಆತನೇ ಇಲ್ಲ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಲ್ಲಿನ ಉದ್ಯಮಿ ಗುರಲಿಂಗಪ್ಪ ಅಂಗಡಿ ಹಾಗೂ ಜಿಪಂ ಸದಸ್ಯೆ ದಾನಮ್ಮ ಗುರಲಿಂಗಪ್ಪ ಪುತ್ರ ರಕ್ಷಿತ್ ಇಂಗ್ಲಿಷ್ ಬರೆಯುವ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದ.
ಓದು ಬೇಡ ಎಂದವ ವಿಜಯಪುರಕ್ಕೇ ಫಸ್ಟ್!
ಕನ್ನಡದಲ್ಲಿ 90, ಭೌತಶಾಸ್ತ್ರದಲ್ಲಿ 90, ರಸಾಯನ ಶಾಸ್ತ್ರದಲ್ಲಿ 92, ಗಣಿತದಲ್ಲಿ 86 ಮತ್ತು ಜೀವಶಾಸ್ತ್ರದಲ್ಲಿ 90 ಅಂಕ ಗಳಿಸಿದ್ದಾನೆ.
