ಮಾದಕ ದ್ರವ್ಯ ಸೇವನೆ ಮಟ್ಟ ಹಾಕುವ ನಿಟ್ಟಿನಲ್ಲಿ ಗೃಹ ಸಚಿವರ ಸಲಹೆಯಂತೆ ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಆ್ಯಂಟಿ ಡ್ರಗ್ ಕಮಿಟಿಯನ್ನು ಸ್ಥಾಪನೆ ಮಾಡಲಾಗುತ್ತಿದೆ. 

ಉಡುಪಿ (ಜೂ.19): ಮಾದಕ ದ್ರವ್ಯದಂತಹ ಸಮಾಜ ಘಾತಕ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಗೃಹ ಸಚಿವರ ಸಲಹೆಯಂತೆ ಸದ್ಯದಲ್ಲೇ ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಆ್ಯಂಟಿ ಡ್ರಗ್ ಕಮಿಟಿಯನ್ನು ಸ್ಥಾಪನೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಜಿಪಂ ಸಿಇಓ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳ ಸಭೆ ಕರೆದು ಚರ್ಚಿಸಲಾಗುವುದು. ಮುಂದೆ ಈ ಕಮಿಟಿಯ ಮೂಲಕ ಸ್ಪಷ್ಟವಾದ ಗುರಿ ಇಟ್ಟುಕೊಂಡು ಕೆಲಸ ಮಾಡಲಾಗುವುದು ಎಂದರು.

BENGALURU: ಮಹಿಳಾ ಸಂಚಾರಿ ಪೊಲೀಸ್‌ ಹೃದಯಾಘಾತದಿಂದ ಸಾವು: ಅನಾಥವಾದ ಮಗು

ಹೆಸರು ತಿಳಿಸದೆ ಮಾಹಿತಿ ನೀಡಿ: ಈಗಾಗಲೇ ಹಲವು ಮಂದಿ ವಿದ್ಯಾರ್ಥಿಗಳು ತಮ್ಮ ಹೆಸರು, ಮೊಬೈಲ್ ನಂಬರ್ ತಿಳಿಸದೆ ಇಂಟರ್‌ನೆಟ್ ಮೂಲಕ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾರೆ. ಇದರಿಂದಲೇ ನಾವು ಸಾಕಷ್ಟು ಪ್ರಕರಣಗಳನ್ನು ಬೇಧಿಸಲು ಸಾಧ್ಯವಾಗಿದೆ. ಅಂತಹ ವಿದ್ಯಾರ್ಥಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಪೋಷಕರು ಕೂಡ ಮಾದಕ ದ್ರವ್ಯ ಜಾಲದಲ್ಲಿ ಸಿಲುಕಿರುವ ತಮ್ಮ ಮಕ್ಕಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎಂದು ಎಸ್ಪಿ ಹೇಳಿದರು. ಈ ರೀತಿ ತಮ್ಮ ಹೆಸರನ್ನು ಬಹಿರಂಗ ಪಡಿಸದೆ ಸಮಾಜ ಘಾತಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು ಮುಂದೆ ಬರಬೇಕು. ನಿಮ್ಮ ಹೆಸರನ್ನು ನಾವು ಕೂಡ ಗೌಪ್ಯವಾಗಿರಿಸಿಕೊಳ್ಳುತ್ತೇವೆ. ಯಾವುದೇ ಮಾಹಿತಿ ಇದ್ದರೂ ನನ್ನ ಮೊಬೈಲ್‌ಗೆ ಕಳುಹಿಸಿಕೊಡಬಹುದು. ಈ ಕಾರ್ಯಚರಣೆಯಲ್ಲಿ ಸಾರ್ವಜನಿಕರ ಪಾತ್ರ ಕೂಡ ಅಗತ್ಯವಾಗಿ ಬೇಕಾಗಿದೆ ಎಂದು ಅವರು ಮನವಿ ಮಾಡಿದರು. 

ಬೆಂಗಳೂರು- ಧಾರವಾಡ ವಂದೇ ಭಾರತ್‌ ರೈಲು: ಅವಧಿಗಿಂತ ಮುಂಚೆಯೇ ಧಾರವಾಡ ತಲುಪಿದ ಎಕ್ಸ್‌ಪ್ರೆಸ್‌

15 ನೈಟ್‌ ಪಾರ್ಟಿಗಳಿಗೆ ದಾಳಿ: ಗೃಹ ಸಚಿವರು ನಿರ್ದೇಶನದಂತೆ ಜಿಲ್ಲೆಯಲ್ಲಿ ಡ್ರಗ್ಸ್ ಜಾಲದ ಬೇರನ್ನು ಹುಡುಕುವ ಕಾರ್ಯ ಮಾಡಲಾಗುವುದು. ಮಣಿಪಾಲದಲ್ಲಿ ಮಧ್ಯರಾತ್ರಿ 12ಗಂಟೆ ನಂತರ ಪಾರ್ಟಿಗಳು ನಡೆಯುತ್ತಿರುತ್ತವೆ. ಕಳೆದ ನಾಲೈದು ತಿಂಗಳಲ್ಲಿ ಒಟ್ಟು ಇಂತಹ 15 ಪಾರ್ಟಿಗಳಿಗೆ ದಾಳಿ ನಡೆಸಿದ್ದೇವೆ. ಅಲ್ಲಿ ಸಿಕ್ಕಿದ ವಿದ್ಯಾರ್ಥಿ ಗಳನ್ನು ಹಿಡಿದುಕೊಂಡು ಈ ಜಾಲವನ್ನು ಭೇದಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.