Asianet Suvarna News Asianet Suvarna News

ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಯಡಿಯೂರಪ್ಪ

ಹೊಸ ಕೊರೋನಾ ತಳಿ ಭೀತಿ ನಡುವೆಯೂ ರಾಜ್ಯದಲ್ಲಿ ಶಾಲಾ-ಕಾಲೇಜು ತರಗತಿ ಪ್ರಾರಂಭದ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

BS Yediyurappa Reacts on School College Reopening rbj
Author
Bengaluru, First Published Dec 28, 2020, 2:48 PM IST

ಬೆಂಗಳೂರು,(ಡಿ.28): ಈಗಾಗಲೇ ನಿಗದಿಯಾಗಿರುವಂತೆ ಜನವರಿ 1ರಿಂದ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

"

ಸಚಿವ ಸಂಪುಟ ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾಕಾಲೇಜುಗಳನ್ನು ಜನವರಿ 1ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದರು.

ಕರ್ನಾಟಕದಲ್ಲಿ ತರಗತಿಗಳು ಪ್ರಾರಂಭ:; ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ

ಮೊದಲ ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಲಿವೆ.  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.95ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಈ ಚುನಾವಣೆಗೆ ಕಾಂಗ್ರೆಸ್‌ನ ಯಾವುದೇ ನಾಯಕರು ಆಸಕ್ತಿ ವಹಿಸಿರಲಿಲ್ಲ ಎಂದು ಹೇಳಿದರು.

ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮುಂದೆ ಗ್ರಾಮ ಪಂಚಾಯಿತಿಎ ಆಯ್ಕೆಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ . ಗ್ರಾಮಗಳ ಅಭಿವೃದ್ಧಿ ಮಾಡಲು ಸದಸ್ಯರಿಗೆ ಸಹಕಾರ ಕೊಡಲು ಪ್ರಮಾಣಿಕ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Follow Us:
Download App:
  • android
  • ios