ಸಹ ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹಿಂಜರಿಯದೇ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಶಿಕ್ಷಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ. ಮತ್ತೊಂದೆಡೆ ಸಚಿವ ಸುರೇಶ್ ಕುಮಾರ್ ಅವರು ತಮ್ಮ ತಾಯಿಗೆ ವಿಶ್ ಮಾಡಿದ್ದು ಹೀಗೆ.

ಬೆಂಗಳೂರು, (ಸೆ.05): ಪ್ರತಿ ವರ್ಷವೂ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೋನಾದಿಂದಾಗಿ ಶಾಲಾ-ಕಾಲೇಜುಗಳು ಮುಚ್ಚಿವೆ. ಹೀಗಾಗಿ ಈ ಬಾರಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಕಡಿಮೆಯಾಗಿದೆ. 

ಆದರೂ, ದೇಶದೆಲ್ಲೆಡೆ ಇಂದು (ಸೆ.05) ಶಿಕ್ಷಕರ ದಿನಾಚರಣೆಯ ಸಂಭ್ರಮ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ-ತಮ್ಮ ಗುರುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ.

ನೆಚ್ಚಿನ ಗುರುವಿಗೆ ಅಚ್ಚುಮೆಚ್ಚಾಗೋವಂಥ ಉಡುಗೊರೆ ನೀಡಿ

ಜನನಿ ತಾನೆ ಮೊದಲ ಗುರು
ಹೌದು...ಮನೆಯೇ ಮೊದಲ‌ ಪಾಠಶಾಲೆ, ಜನನಿ ತಾನೆ ಮೊದಲ ಗುರು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಮ್ಮ ತಾಯಿಗೆ ಕಾಲು ಮುಗಿದು ಶಿಕ್ಷಕರ ದಿನಾಚರಣೆಯ ಶುಭಾಯ ಕೋರಿದ್ದಾರೆ.

ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸುರೇಶ್ ಕುಮಾರ್, ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು, ಜನನಿಯಿಂದ ಪಾಠ ಕಲಿತ ಜನರು ಧನ್ಯರು ಎಂದು ಬರೆದುಕೊಂಡಿದ್ದಾರೆ.

Scroll to load tweet…