ರಾಜ್ಯದ ಎಲ್ಲ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿನ ಧಾರ್ಮಿಕ ಹಬ್ಬಗಳ ಆಚರಣೆ ನಿಷೇಧದ ಆದೇಶವನ್ನು ಸರ್ಕಾರ ಕೆಲವೇ ಗಂಟೆಗಳಲ್ಲಿ ಹಿಂಪಡೆದುಕೊಂಡಿದೆ.

ಬೆಂಗಳೂರು (ಫೆ.15): ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೊಳಪಡುವ ಎಲ್ಲ ವಸತಿ ಶಾಲೆ ಹಾಗೂ ವಸತಿ ಕಾಲೇಜುಗಳಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ಎಂದು ಹೊರಡಿಸಿದ ಆದೇಶಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಹೊರಡಿಸಿದ್ದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆಯಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿತ್ತ. ಆದರೆ, ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಮತ್ತು ರಾಷ್ಟ್ರೀಯ ಮತ್ತು ನಾಡಿನ ಗಣ್ಯ ವ್ಯಕ್ತಿಗಳ ಜಯಂತಿಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಆದೇಶ ಹೊರಡಿಸಲಾಗಿತ್ತು. ಈ ಈ ಮೂಲಕ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೊಳಪಡುವ ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಸೂಚಿಸಲಾಗಿತ್ತು.

ರಾಜ್ಯದ ಎಲ್ಲ ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಶಾರದಾಪೂಜೆ, ಗಣೇಶೋತ್ಸವ ನಿಷೇಧ

ಈ ಮೂಲಕ ಸರ್ಕಾರದ ಸೂಚಿಸಿದ ಹಬ್ಬಗಳನ್ನು ಬಿಟ್ಟು ಇತರೆ ಹಬ್ಬಗಳಾದ ಸರಸ್ವತಿ-ಶಾರದಾ ಪೂಜೆ, ಗಣೇಶೋತ್ಸವ, ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಇದಕ್ಕೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವೇ ಗಂಟೆಗಳಲ್ಲಿ ಇದನ್ನು ಹಿಂಪಡೆಯಲಾಗಿದೆ.