ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ಶಾಲಾ-ಕಾಲೇಜುಗಳು ಬಂದ್ ಆಗಿ 2 ವರ್ಷಗಳೇ ಆಗುತ್ತಲಿದೆ ಮತ್ತೆ ಶಾಲೆ ಆರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು-ಸಿಎಂ ಚರ್ಚೆ 9 ರಿಂದ 12 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು (ಆ.06) : ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ಶಾಲಾ-ಕಾಲೇಜುಗಳು ಬಂದ್ ಆಗಿ 2 ವರ್ಷಗಳೇ ಆಗುತ್ತಲಿದ್ದು, ಇದೀಗ ಮತ್ತೆ ಶಾಲೆ ಆರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. 

Add Asianetnews Kannada as a Preferred SourcegooglePreferred

ಈಗಾಗಲೇ ಶಾಲೆ ಪ್ರಾರಂಭಿಸುವಂತೆ ಸರ್ಕಾರಕ್ಕೆ ತಜ್ಞರ ಸಮಿತಿ ವರದಿ ಸಲ್ಲಿಸಿದ್ದು, ಭೌತಿಕ ತರಗತಿ ಅಥವಾ ವಿದ್ಯಾಗಮ ಪ್ರಾರಂಭಿಸಲು ಸಲಹೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಶಿಕ್ಷಣ ‌ಇಲಾಖೆ ಆಯುಕ್ತರು ಚರ್ಚೆ ನಡೆಸಿದದ್ದು, ಆಗಸ್ಟ್ 23 ರಿಂದ ಶಾಲಾ-ಕಾಲೇಜು ಪ್ರಾರಂಭದ ಬಗ್ಗೆ ನಿರ್ಧರಿಸಿದ್ದಾರೆ.

ಎರಡು ಹಂತದಲ್ಲಿ ಶಾಲಾ-ಕಾಲೇಜು ಪ್ರಾರಂಭ ಮಾಡುವ ಬಗ್ಗೆ ಸಿಎಂ ಹಾಗೂ ಶಿಕ್ಷಣ ಇಲಾಖೆ ಆಯುಕ್ತರು ಚರ್ಚಿಸಿದ್ದು ಮೊದಲ ಹಂತದಲ್ಲಿ 9-12 ನೇ ತರಗತಿಗೆ ಬ್ಯಾಚ್ ವೈಸ್ ತರಗತಿಗಳು ನಡೆಸಲು ಸೂಚನೆ ನೀಡಲಾಗಿದೆ. ದಿನ ಬಿಟ್ಟು ದಿನ ತರಗತಿಗಳನ್ನ ನಡೆಸಲು ಸೂಚನೆ ನೀಡಲಾಗಿದೆ. ಒಂದು ಬ್ಯಾಚ್ ಗೆ ವಾರದಲ್ಲಿ ಮೂರು ದಿನ ತರಗತಿಗಳಿರುತ್ತದೆ.

ಶಾಲೆ ಆರಂಭ ಸ್ವಲ್ಪ ಲೇಟ್, SSLC Resultಗೆ ಮುಹೂರ್ತ ಫಿಕ್ಸ್

1-8 ನೇ ತರಗತಿ ಪ್ರಾರಂಭ ವಿಚಾರದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆಗಸ್ಟ್ ಕೊನೆ ವಾರದಲ್ಲಿ ಪರಿಸ್ಥಿತಿ ಅವಲೋಕನ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.