ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ- ಕಾಲೇಜುಗಳನ್ನು ತೆರೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ. ಎಂ.ಆರ್‌. ದೊರೆಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 

ಬೆಂಗಳೂರು (ಸೆ.08): ಸುರಕ್ಷತಾ ಕ್ರಮಗಳನ್ನು ಕೈಗೊಂಡು ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ- ಕಾಲೇಜುಗಳನ್ನು ತೆರೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ. ಎಂ.ಆರ್‌. ದೊರೆಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು.

Add Asianetnews Kannada as a Preferred SourcegooglePreferred

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ನಿಧಾನವಾಗಿ ಕೊರೋನಾ ಭಯ ಕಡಿಮೆಯಾಗುತ್ತಿದೆ. ಹೀಗಾಗಿ, ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿಗಳು ಸುರಕ್ಷತಾ ಕ್ರಮ ಕೈಗೊಂಡು ಶಾಲಾ ಕಾಲೇಜುಗಳನ್ನು ಆರಂಭಿಸಲು ಸಿದ್ಧರಾಗಿರುವುದರಿಂದ ಆರಂಭಿಸಲು ಅನುಮತಿ ನೀಡಬೇಕು.

ಶಾಲಾ-ಕಾಲೇಜುಗಳ ತೆರಿಗೆ ಮನ್ನಾಕ್ಕೆ ಒತ್ತಾಯ: ವಿದ್ಯಾರ್ಥಿಗಳ ಶುಲ್ಕ ಕಡಿಮೆಯಾಗುತ್ತಾ..? ...

ಸಾಮಾನ್ಯವಾಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜು ನಂತರ ಪದವಿ, ವೈದ್ಯಕೀಯ ತರಗತಿಗಳಿಗೆ ಶಾಲಾ- ಕಾಲೇಜುಗಳು ಆರಂಭವಾಗುತ್ತವೆ. 

ಆದರೆ, ಕೊರೋನಾ ಕಾಲಘಟ್ಟವಾಗಿರುವುದರಿಂದ ಕೊರೋನಾ ಬಗ್ಗೆ ಜಾಗೃತಿ ಹೊಂದಿರುವವರಿಗೆ ಮೊದಲು ತರಗತಿಗಳನ್ನು ಆರಂಭಿಸಬೇಕು. ಮೊದಲ ಹಂತದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್‌, ನಂತರ ಪದವಿ, ಪದವಿ ಪೂರ್ವ, ಪ್ರೌಢಶಾಲೆ, ಪ್ರಾಥಮಿಕ ಶಾಲೆ ಈ ರೀತಿ ಹಂತ ಹಂತವಾಗಿ ಕಾಲೇಜು-ಶಾಲೆಗಳನ್ನು ತೆರೆಯಲು ಅವಕಾಶ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.