Asianet Suvarna News Asianet Suvarna News

2023ರಿಂದ ಕರ್ನಾಟಕದಲ್ಲಿ ಒಂದೇ ಸಿಇಟಿ: ಅಶ್ವತ್ಥನಾರಾಯಣ

*   ಕಾಮೆಡ್‌-ಕೆ ಪ್ರವೇಶ ಪರೀಕ್ಷೆ ರದ್ದು
*  ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಜತೆಗಿನ ಸಚಿವರ ಸಭೆಯಲ್ಲಿ ನಿರ್ಧಾರ
*  ಕಾಮೆಡ್‌-ಕೆ ಸ್ಥಗಿತಗೊಂಡರೆ ಸರ್ಕಾರ ಸಿಇಟಿ ಪರೀಕ್ಷೆ ನಡೆಸಲಿದೆ 
 

One CET in Karnataka from 2023 Onwards Says Minister CN Ashwath Narayan grg
Author
Bengaluru, First Published Jun 23, 2022, 10:49 AM IST

ಬೆಂಗಳೂರು(ಜೂ.23):  ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್‌-ಕೆ ಪರೀಕ್ಷೆಯನ್ನು ರದ್ದುಪಡಿಸಿ ಸಿಇಟಿ ವ್ಯವಸ್ಥೆಯಡಿ ತರಲು ಸರ್ಕಾರ ತೀರ್ಮಾನಿಸಿದೆ. ಬುಧವಾರ ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಒಕ್ಕೂಟ (ಕ್ಯುಪೇಕಾ) ಜತೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್‌-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರ್ಕಾರದ ಸಿಇಟಿ ವ್ಯವಸ್ಥೆಯಡಿ ತರಲಾಗುವುದು. ಇದಕ್ಕೆ ಕ್ಯುಪೇಕಾ ಆಸಕ್ತಿ ತೋರಿವೆ. ಈ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು ಎಂದು ತಿಳಿಸಿದರು.

ಆನ್ ಲೈನ್ ಮೂಲಕವೇ ಪದವಿ ಪ್ರವೇಶ ಪ್ರಕ್ರಿಯೆ, ಸಚಿವ ಡಾ‌. ಅಶ್ವಥ್ ನಾರಾಯಣ

ಖಾಸಗಿ ಕಾಲೇಜುಗಳು ದುಬಾರಿ ಶುಲ್ಕದ ಮ್ಯಾನೇಜ್ಮೆಂಟ್‌ ಸೀಟುಗಳಿಗಾಗಿ ತಾವೇ ನಡೆಸುತ್ತಿರುವ ಕಾಮೆಡ್‌-ಕೆ ಪರೀಕ್ಷೆಯನ್ನು ನಿಲ್ಲಿಸಲು ಮುಂದಾಗಿವೆ. ಇದರ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಸಮಿತಿ ರಚಿಸಲಾಗುವುದು. ಇದನ್ನು ಆಧರಿಸಿ ಕ್ಯುಪೇಕಾ ಜತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು. ಕಾಮೆಡ್‌-ಕೆ ಸ್ಥಗಿತಗೊಂಡರೆ ಸರ್ಕಾರವು ಸಿಇಟಿ ಪರೀಕ್ಷೆ ನಡೆಸಲಿದೆ. ಇದರಲ್ಲಿ ವಿದ್ಯಾರ್ಥಿಗಳು ಪಡೆಯುವ ರಾರ‍ಯಂಕಿಂಗ್‌ ಆಧರಿಸಿ ಈಗಿನಂತೆಯೇ ಸೀಟು ಹಂಚಿಕೆ ಮಾಡಲಾಗುವುದು. ಸಿಇಟಿ ಪರೀಕ್ಷೆ ಒಂದೇ ನಡೆಸುವುದರಿಂದ ಪ್ರಸ್ತುತ ಆಗುತ್ತಿರುವ ಗೊಂದಲ ಮತ್ತು ಅಪವ್ಯಯ ಎರಡೂ ನಿವಾರಣೆಯಾಗಲಿವೆ ಎಂದು ಹೇಳಿದರು.
 

Follow Us:
Download App:
  • android
  • ios