ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ಸರ್ಕಾರವು 60 ದಿನಗಳ ವಯೋಮಿತಿ ಸಡಿಲಿಕೆ ಮಾಡಿರುವುದಕ್ಕೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷದಂತೆ 5.5 ವರ್ಷ ಪೂರ್ಣಗೊಂಡ ಎಲ್ಲಾ ಮಕ್ಕಳಿಗೂ ಪ್ರವೇಶ ನೀಡಬೇಕೆಂದು ಆಗ್ರಹಿಸಿ, ಸಾಮಾಜಿಕ ಜಾಲತಾಣಗಳ ಆಂದೋಲನವನ್ನು ಪ್ರಾರಂಭಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ 60 ದಿನಗಳ ವಯೋಮಿತಿ ಸಡಿಲಿಕೆಯಿಂದ ಸಮಾಧಾನಗೊಳ್ಳದ ಪೋಷಕ ವರ್ಗ, ಕಳೆದ ವರ್ಷ ಇದ್ದಂತೆ 5.5 ವರ್ಷ ಪೂರ್ಣಗೊಂಡ ಎಲ್ಲ ಮಕ್ಕಳಿಗೂ ಶಾಲಾ ಪ್ರವೇಶ ಕಲಿಸಬೇಕೆಂದು ಪ್ರಬಲವಾಗಿ ಆಗ್ರಹಿಸುತ್ತಿದೆ. ಅಲ್ಲದೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಆಂದೋಲನಕ್ಕೂ ಮುಂದಾಗಿದೆ. ಆಂದೋಲನದ ಮೂಲಕ ಎಲ್ಲಾ ಅರ್ಹ ಪೋಷಕರನ್ನು ದೊಟ್ಟಮಟ್ಟದಲ್ಲಿ ಸಂಘಟಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಇಲಾಖಾ ಅಧಿಕಾರಿಗಳನ್ನು ಭೇಟಿ ಮಾಡಿ ಒಟ್ಟಾಗಿ ಒತ್ತಡ ಹಾಕಲು ಪೋಷಕ ವರ್ಗ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ಕೆಲವೇ ತಿಂಗಳ ವಯೋಮಿತಿ ಕೊರತೆಯಿಂದ ತಮ್ಮ ಮಕ್ಕಳು 1ನೇ ತರಗತಿ ಪ್ರವೇಶ ಪಡೆಯುವುದರಿಂದ ವಂಚಿತರಾಗುವುದನ್ನು ತಡೆಯುವುದಕ್ಕೆ ದೊಡ್ಡ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ.

Add Asianetnews Kannada as a Preferred SourcegooglePreferred

ಸರ್ಕಾರ 1ನೇ ತರಗತಿ ಪ್ರವೇಶಕ್ಕೆ ಕೇವಲ 60 ದಿನಗಳ ವಯೋಮಿತಿ ಸಡಿಲಿಕೆ ಮಾಡಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಕಳೆದ ವರ್ಷದಂತೆ 5.5 ವರ್ಷ ವಯೋಮಿತಿ ನಿಗದಿಪಡಿಸಲು 5 ಲಕ್ಷಕ್ಕೂ ಹೆಚ್ಚು ಪೋಷಕರು ಮೊದಲಿನಿಂದಲೂ ಹೋರಾಟ ಮಾಡುತ್ತಾ ಬರುತ್ತಿದ್ದರೂ ಸರ್ಕಾರ ಪೋಷಕರು, ತಜ್ಞರು, ಶಾಲೆಗಳೊಂದಿಗೆ ಚರ್ಚಿಸದೆ ಏಕಾಏಕಿ 60 ದಿನಗಳ ನಿಲುವು ತೆಗೆದುಕೊಂಡಿದೆ. ಇದರಿಂದ 1 ಲಕ್ಷದಷ್ಟು ಮಕ್ಕಳಿಗಷ್ಟೇ ಪ್ರವೇಶಕ್ಕೆ ವಯೋಮಿತಿ ಅರ್ಹತೆ ದೊರೆಯುತ್ತದೆ.

ಇದನ್ನೂ ಓದಿ: ಜಾರಿ ಬಿದ್ದ ಪಾಕ್ ವಿದೇಶಾಂಗ ಸಚಿವ: 4 ಇಸ್ಲಾಮಿಕ್ ದೇಶಗಳ ಸಭೆಯಲ್ಲಿ ಘಟನೆ

ಉಳಿದ 4 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಅನಗತ್ಯವಾಗಿ 1 ವರ್ಷ ವ್ಯರ್ಥವಾಗಲಿದೆ. ದಶಕಗಳಿಂದ ನಡೆದು ಬರುತ್ತಿದ್ದ ನಿಯಮಗಳನ್ನು ಅನಗತ್ಯವಾಗಿ ಬದಲಾವಣೆ ಮಾಡಿ ಸರ್ಕಾರ, ಶಿಕ್ಷಣ ಇಲಾಖೆ ಮಕ್ಕಳು ಹಾಗೂ ಪೋಷಕರಲ್ಲಿ ಗೊಂದಲ ಉಂಟು ಮಾಡುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಭಾರತದಿಂದ ಶ್ರೀಲಂಕಾಕ್ಕೆ 38,000 ಮೆಟ್ರಿಕ್ ಟನ್ ಪೆಟ್ರೋಲ್, ಡೀಸೆಲ್‌: ಪೆಟ್ರೋಲ್ ಬಂಕಲ್ಲೂ ಸೀಮೆಎಣ್ಣೆ ವಿತರಣೆಗೆ ಸದ್ಯ ಅವಕಾಶ: ಕೇಂದ್ರ

ವಾಟ್ಸ್ಆ್ಯಪ್ ಸ್ಟೇಟಸ್, ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಂನಲ್ಲಿ 60 ದಿನಗಳ ವಯೋಮಿತಿ ಸಡಿಲಿಕೆಯಿಂದ ಲಕ್ಷಾಂತರ ಮಕ್ಕಳಿಗೆ ಆಗುವ ತಾರತಮ್ಯದ ವಿಡಿಯೋ, ಪೋಸ್ಟ‌ರ್‌ಗಳನ್ನು ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಅನ್ಯಾಯ ಸರಿಪಡಿಸಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಷಕರ ಸಂಘಟನೆ ಮೂಲಕ ಮನವಿ ಮಾಡಿದ್ದು ಕೂಡಲೇ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ವಹಿಸಲು ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.