* ಶಾಲಾ ಕಾಲೇಜುಗಳ ಪುನರಾರಂಭಕ್ಕೆ ಸರ್ಕಾರ ಒತ್ತಾಸೆ* ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾವಕಾಶ* ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಮಾಧ್ಯಮ ಪ್ರಕಟಣೆ

ಬೆಂಗಳೂರು, (ಜೂನ್.13):  ಮಹಾಮಾರಿ ಕೊರೋನಾ ಕಾಟಕೊಟ್ಟಿದ್ದು, ಅಷ್ಟಿಷ್ಟಲ್ಲ. ಕಳೆದೆರಡು ವರ್ಷಗಳಿಂದ ಶಿಕ್ಷಣ ಕ್ಷೇತ್ರ ಸೆರಿದಂತೆ ಹಲವು ಕ್ಷೇತ್ರಗಳನ್ನು ಕಟ್ಟಿಕಾಡಿದೆ. ಇದರಿಂದ ಕ್ಷೇತ್ರಗಳು ಎಲ್ಲಾ ರೀತಿಯಿಂದಲೂ ನಷ್ಟ ಅನುಭಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೀಗ ಕೊರೋನಾ ಕಡಿಮೆಯಾಗಿದ್ದು, ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳತ್ತ ಹೆಜ್ಜೆಹಾಕಲು ಹಾತೊರೆಯುತ್ತಿದ್ದಾರೆ. ಇನ್ನು ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾವಕಾಶ ಕಲ್ಪಿಸಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ (Dr CN Ashwath Narayan) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 2022-23ನೇ ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಆದರೆ ಸದ್ಯಕ್ಕೆ ಆನ್ ಲೈನ್ ಮೂಲಕವೇ ಪ್ರವೇಶ ಪ್ರಕ್ರಿಯೆ (online admission) ನಡೆಸುವಂತೆ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಏಳು ಡಿಜಿಟಲ್‌ ವಿವಿ ಸ್ಥಾಪನೆಗೆ ನಿರ್ಧಾರ: ಸಿಎಂ ಬೊಮ್ಮಾಯಿ

ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್ ಲೈನ್ ಪ್ರವೇಶಕ್ಕೆ ಕಾಲೇಜು ಶಿಕ್ಷಣ ಇಲಾಖೆ, ವಿವಿಗಳು ಮತ್ತು ಕಾಲೇಜುಗಳು ಸಜ್ಜುಗೊಂಡಿವೆ. ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ https://uucms.karnataka.gov.in/ ವಿಳಾಸವನ್ನು ತಮ್ಮ ವೆಬ್ ಸೈಟುಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು. ಜತೆಗೆ ಎಲ್ಲ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕೆಂದು‌ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.