ಕೆಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಕೂಡ ಶಾಲೆಗೆ ತೆರಳಿ ಪಾಠ ಮಾಡಿದ್ದಾರೆ. ವೆಬ್‌ಕಾಸ್ಟಿಂಗ್ ಬಗ್ಗೆ ಆತಂಕ, ಭಯ ಮಕ್ಕಳಲ್ಲಿ ಮೂಡದಂತ ಘಟಕ ಪರೀಕ್ಷೆಗಳನ್ನೂ ಇದೇ ವ್ಯವಸ್ಥೆಯಡಿ ಮಾಡಲಾಗಿದೆ. ಈ ಎಲ್ಲಾ ಕ್ರಮಗಳಿಂದ ಈ ಬಾರಿ ಫಲಿತಾಂಶ ಸುಧಾರಣೆಯಾಗುವ ಸಂಪೂರ್ಣ ನಿರೀಕ್ಷೆ ಇದೆ ಎಂದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ 

ಬೆಂಗಳೂರು(ಫೆ.04): ವೆಬ್‌ ಕಾಸ್ಟಿಂಗ್ ಜಾರಿಯಿಂದ ಕಳೆದ ಸಾಲಿ ನಲ್ಲಿ ಕುಸಿದಿದ್ದ ಎಸ್ಸೆಸ್ಸೆಲ್ಸಿ ಫಲಿ ತಾಂಶವನ್ನು ಈ ಬಾರಿ ಹೆಚ್ಚಿಸಲು ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಹಲವು ಸೂತ್ರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಫಲಿತಾಂಶ ಏರಿಕೆಯಾಗುವುದು ಶೇ.100ರಷ್ಟು ಗ್ಯಾರಂಟಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಅಲ್ಲದೆ, ಕುಸಿದ ಫಲಿತಾಂಶವನ್ನು ತಕ್ಕ ಮಟ್ಟಿಗೆ ಸರಿದೂಗಿಸಲು ನೀಡಲಾಗಿದ್ದ ಶೇ.10ರಷ್ಟು ಹೆಚ್ಚುವರಿ ಗ್ರೇಸ್ ಅಂಕವನ್ನು ಈ ಬಾರಿ ನೀಡದಿರಲು ತೀರ್ಮಾನಿಸಲಾಗಿದೆ. ಅದೇ ರೀತಿ ಕೆಲವೇ ಅಂಕಗಳಿಂದ ಪಾಸಾಗುವುದರಿಂದ ವಂಚಿತರಾಗುವ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಕೇಂದ್ರದ ನೀತಿ ಹಾಗೂ ಕೋವಿಡ್ ಬಳಿಕದ ತೀರ್ಮಾನದಂತೆ ನೀಡಲಾಗುತ್ತಿರುವ ಶೇ.10 ರಷ್ಟು ಗ್ರೇಸ್ ಅಂಕ ಮುಂದು ವರೆಸಬೇಕಾ? ಬೇಡವೋ? ಎಂಬ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕಾಗಿ ಮಾಸ್ಟರ್‌ ಪ್ಲಾನ್‌: ಪ್ರದೀಪ್‌ ಈಶ್ವರ್‌

ಬೆಂಗಳೂರಿನ ಹೊಸಕೆರೆಹಳ್ಳಿ ಬಳಿಯ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ ಇಆರ್‌ಟಿ) ಕಚೇರಿಯಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ತಯಾರಿಗೆ ಕೈಗೊಂಡಿ ರುವ ಚಟುವಟಕೆಗಳ ಕುರಿತು ಮಾಹಿತಿ ನೀಡಿದರು. 

ಕಳೆದ ಸಾಲಿನಲ್ಲಿ ಫಲಿತಾಂಶ ಕುಸಿತವಾದರೂ ವೆಬ್‌ ಕಾಸ್ಟಿಂಗ್ ಜಾರಿಯಿಂದ ನಮ್ಮ ಮಕ್ಕಳ ನೈಜ ಕಲಿಕಾ ಮಟ್ಟ ಹೇಗಿದೆ ಎಂದು ತಿಳಿಯಲು ಇದು ಸಾಧ್ಯವಾಯಿತು. ಇದರಿಂದ ಮಕ್ಕಳ ಕಲಿಕಾ ಮಟ್ಟ ಹೆಚ್ಚಿಸಲು ಈ ಬಾರಿ ಬೆಳಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಕರೆ ಮಾಡಿ ಓದಲು ಎಚ್ಚರಿಸುವುದು, ವಿಶೇಷ ತರಗತಿ, ಗಣಿತ ಗಣಕ ಕಾರ್ಯಕ್ರಮ, ಗುಂಪು ಅಧ್ಯಯನ ಹೀಗೆ ಹಲವು ಕಾಠ್ಯಕ್ರಮಗಳನ್ನು ನಡೆಸಲಾಗಿದೆ.

ಕೆಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಕೂಡ ಶಾಲೆಗೆ ತೆರಳಿ ಪಾಠ ಮಾಡಿದ್ದಾರೆ. ವೆಬ್‌ಕಾಸ್ಟಿಂಗ್ ಬಗ್ಗೆ ಆತಂಕ, ಭಯ ಮಕ್ಕಳಲ್ಲಿ ಮೂಡದಂತ ಘಟಕ ಪರೀಕ್ಷೆಗಳನ್ನೂ ಇದೇ ವ್ಯವಸ್ಥೆಯಡಿ ಮಾಡಲಾಗಿದೆ. ಈ ಎಲ್ಲಾ ಕ್ರಮಗಳಿಂದ ಈ ಬಾರಿ ಫಲಿತಾಂಶ ಸುಧಾರಣೆಯಾಗುವ ಸಂಪೂರ್ಣ ನಿರೀಕ್ಷೆ ಇದೆ ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ

ಗ್ರೇಸ್ ಅಂಕ ಇಲ್ಲ:

ವೆಬ್‌ ಕಾಸ್ಟಿಂಗ್ ಜಾರಿ ಯಿಂದ ತೀವ್ರವಾಗಿ ಫಲಿತಾಂಶ ಕುಸಿದಿದ್ದ ರಿಂದ ಕಳೆದ ಬಾರಿ ಅದುವರೆಗೆ ಇದ್ದ ಶೇ.10 ರಷ್ಟು ಗ್ರೇಸ್ ಅಂಕದ ಜೊತೆ ಹೆಚ್ಚುವರಿಯಾಗಿ ಶೇ.10ರಷ್ಟು ಸೇರಿಸಿ ಒಟ್ಟು ಶೇ.20ರಷ್ಟು ಗ್ರೇಸ್ ಅಂಕ ನೀಡಲಾಗಿತ್ತು. ಆದರೆ, ಈ ಬಾರಿ ಹೆಚ್ಚುವರಿ ಗ್ರೇಸ್ ಅಂಕ ನೀಡುವುದಿಲ್ಲ, ಉಳಿದ ಶೇ.10 ರಷ್ಟು ಗ್ರೇಸ್ ಅಂಕ ನೀಡಬೇಕಾ? ಬೇಡವಾ? ಎಂದು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಲ್ಲದೆ, ಮಕ್ಕಳಿಗಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸಲು ಮಾರ್ಗಸೂಚಿ ತರಲಾಗಿದೆ. ಪರೀಕ್ಷೆಗೆ 50 ದಿನಗಳು ಇದ್ದು, ಈ ಮಾರ್ಗಸೂಚಿ ಅನುಸಾರ ದೈನಂದಿನ ಅಧ್ಯಯನ ನಡೆಸಿದರೆ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ತಯಾರಾಗಲಿದ್ದಾರೆ ಎಂದರು.

ಹಿಜಾಬ್ ವಿವಾದದ ಬಗ್ಗೆ ಪರಂರನ್ನು ಕೇಳಿ: ಸಚಿವ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ನಾನೇನೂ ಹೇಳಿಕೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಅವರನ್ನು ಹೇಳಿ, ಅವರು ಉತ್ತರ ಕೊಡುತ್ತಾರೆ ಎಂದು ಸಚಿವರು ಹೇಳಿದರು.
ವಿವಾದ ಕುರಿತು ನ್ಯಾಯಾಲಯದ ಲ್ಲಿರುವ ಅರ್ಜಿಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ವಿಚಾರ ಏನಾಯಿತು ಎಂಬ ಪ್ರಶ್ನೆಗೆ, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ ಮಾಡಿ ಉತ್ತರ ಕೊಡುತ್ತೇನೆ ಎಂದರು. ಈ ಬಾರಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಬರಲು ಅವಕಾಶ ಇರುತ್ತಾ, ಇಲ್ಲವಾ ಎಂಬ ಪ್ರಶ್ನೆಗೆ, ಈ ಬಗ್ಗೆ ನಾನು ಏನೂ ಹೇಳಲಾಗುವುದಿಲ್ಲ. ಗೃಹ ಸಚಿವರು ಇದಕ್ಕೆ ಉತ್ತರ ಕೊಡುತ್ತಾರೆ. ಅವರನ್ನೇ ಕೇಳಿ. ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದರು.