ಚಿಕ್ಕ ವಯಸ್ಸಿನಿಂದಲೇ ಐಎಎಸ್ ಮಾಡಬೇಕು ಪಾಲಕರು ಹುರಿದುಂಬಿಸುತ್ತಿದ್ದರು. ಎಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಯುಪಿಎಸ್‌ಸಿ ಬಗ್ಗೆ ಆಸಕ್ತಿ ಬಂತು. ಮೊದಲ ಪ್ರಯತ್ನದಲ್ಲಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನಕ್ಕೆ ಅರ್ಹತೆ ಸಿಗಲಿಲ್ಲ. ಆದರೆ, ಪರೀಕ್ಷೆಯ ಸ್ವರೂಪ ಅರ್ಥವಾಯಿತು. 

ಬೆಂಗಳೂರು (ಏ.17): ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ತಮ್ಮ ಎರಡನೇ ಪ್ರಯತ್ನದಲ್ಲೇ ಬೆಂಗಳೂರಿನ ಹಂಸಶ್ರೀ ಅವರು 866ನೇ ರ್ಯಾಂಕ್‌ ಪಡೆದಿದ್ದಾರೆ ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಉತ್ತೀರ್ಣರಾಗಿರುವ ಹಂಸಶ್ರೀ ತಂದೆ-ತಾಯಿ ಕಾಲೇಜು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕ ವಯಸ್ಸಿನಿಂದಲೇ ಐಎಎಸ್ ಮಾಡಬೇಕು ಪಾಲಕರು ಹುರಿದುಂಬಿಸುತ್ತಿದ್ದರು. ಎಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಯುಪಿಎಸ್‌ಸಿ ಬಗ್ಗೆ ಆಸಕ್ತಿ ಬಂತು. ಮೊದಲ ಪ್ರಯತ್ನದಲ್ಲಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನಕ್ಕೆ ಅರ್ಹತೆ ಸಿಗಲಿಲ್ಲ. ಆದರೆ, ಪರೀಕ್ಷೆಯ ಸ್ವರೂಪ ಅರ್ಥವಾಯಿತು. 

ನಂತರ ಎರಡು ವರ್ಷಗಳಿಂದ ಕೋಚಿಂಗ್ ಕ್ಲಾಸ್‌ಗಳ ಜೊತೆಗೆ ದಿನಕ್ಕೆ 8 ರಿಂದ ಗರಿಷ್ಠ 12 ತಾಸು ಓದುತ್ತಿದ್ದೆ. ದೇಶ ಪ್ರಗತಿ, ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಸಮಾಜ ಸೇವೆ ಮಾಡಬೇಕು ಎಂಬ ಆಸಕ್ತಿಯಿಂದ ಯುಪಿಎಸ್‌ಸಿ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೆ ಎಂದು ಹಂಸಶ್ರೀ ‘ಕನ್ನಡಪ್ರಭ’ಕ್ಕೆ ತಿಳಿಸಿದರು.

‘ಶೌಚಾಲಯ’ ಅಭಿಯಾನ ನಡೆಸಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಶಾಂತಪ್ಪಗೆ ಯುಪಿಎಸ್‌ಸಿಯಲ್ಲಿ 644ನೇ ರ್‍ಯಾಂಕ್‌!

ದೊಡ್ಡ ಸಂಖ್ಯೆಯಲ್ಲಿ ಜನ ಪರೀಕ್ಷೆ ಬರೆಯುತ್ತಾರೆ. ಆದರೆ, ಪರೀಕ್ಷೆ ತೆಗೆದುಕೊಳ್ಳುವವರು ಅಧ್ಯಯನದ ಜೊತೆಗೆ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ತಾನು ಓದಿನ ಜೊತೆಗೆ ಸಂಗೀತ ನೃತ್ಯದಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು ಹಂಸಶ್ರೀ ಹೇಳಿದರು. 866ನೇ ರ‍್ಯಾಂಕ್‌ ಬಂದಿದ್ದರೂ ಐಎಎಸ್‌ಗಾಗಿ ಮತ್ತಷ್ಟು ಪ್ರಯತ್ನಗಳನ್ನು ಮಾಡುತ್ತೇನೆ ಎಂದರು.