ಮಂಡ್ಯ ರಣ ಕಣದ ಮತದಾನ ಮುಗಿದಿದ್ದರೂ ಅಲ್ಲಿಗೆ ಸಂಬಂಧಿಸಿದ ಸುದ್ದಿಗಳಿಗೆ ಯಾವ ಕೊರತೆಯೂ ಇಲ್ಲ. ಮಂಡ್ಯ ಮತದಾನ ಮುಗಿಯುತ್ತಿದ್ದಂತೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ದುಬೈಗೆ ಹಾರಲು ಟಿಕೆಟ್ ಬುಕ್ ಮಾಡಿದ್ದಾರಾ? ಸತ್ಯಾಸತ್ಯತೆ ಏನು?
ಬೆಂಗಳೂರು[ಏ. 19] ಮಂಡ್ಯ ರಣಾಂಗಣದ ಮತದಾನ ಮುಗಿದಿದೆ. ಆದರೆ ವೋಟಿಂಗ್ ಓವರ್ ಆಗ್ತಾ ಇದ್ದಹಾಗೆ ನಿಖಿಲ್ ಕುಮಾರಸ್ವಾಮಿ ದುಬೈಗೆ ಹಾರಲಿದ್ದಾರೆ! ಅಚ್ಚರಿ ಆಗ್ತಾ ಇದೆಯಾ? ನಿಖಿಲ್ ಕುಮಾರಸ್ವಾಮಿ ಹೆಸರಿನಲ್ಲಿ ಬೆಂಗಳೂರು ಟು ದುಬೈಗೆ ಬುಕ್ ಆಗಿರುವ ವಿಮಾನ ಟಿಕೆಟ್ ಒಂದು ಸೊಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Add Asianetnews Kannada as a Preferred Source

ಫಲಿತಾಂಶಕ್ಕೂ ಮುನ್ನವೇ ನಿಖಿಲ್ ಕೆ. ಸಂಸದರು, ಮಂಡ್ಯ!
ಫೇಸ್ ಬುಕ್, ವಾಟ್ಸಪ್ ಸೇರಿದಂತೆ ವಿವಿಧ ಕಡೆ ಈ ಪೋಟೋ ಹರಿದಾಡುತ್ತಿದೆ. ಮಂಡ್ಯಚುನಾವಣೆ ಇಡೀ ರಾಜ್ಯದ ಗಮನ ಸೆಳೆದಿತ್ತು. ಏಪ್ರಿಲ್ 18 ರಂದು ಮತದಾನವಾಗಿದ್ದು ಲೋಕಸಭಾ ಚುನಾವಣೆ ವಿಚಾರದಲ್ಲಿ ದಾಖಲೆಯ ಅಂದರೆ ಶೇ. 80 ಮತದಾನವಾಗಿತ್ತು.
ಅಲ್ಲದೇ ಇಂಡಿಯನ್ ಏರ್ ಲೈನ್ಸ್ ಎನ್ನುವ ವಿಮಾನಯಾನ ಸಂಸ್ಥೆಯೂ ಇಲ್ಲ. ಏರ್ ಇಂಡಿಯಾ ಸೇವೆ ನೀಡುತ್ತಿದೆ. ಒಟ್ಟಿನಲ್ಲಿ ಹರಿದಾಡುತ್ತಿರುವ ಪೋಟೋ ದೊಡ್ಡ ಪ್ರಮಾಣದಲ್ಲಿ ವೈರಲ್ ಆಗುತ್ತಿದೆ.
