ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿಯಂತೆ| ಪ್ರಧಾನಿ ಅವರಲ್ಲಿ ಹುಲಿಯ ಗುಣಗಳಿವೆ ಎಂದ ಬೇಜಾನ್ ದಾರುವಾಲಾ| ರಾಹುಲ್ ಅವರಲ್ಲಿ ನಾಯಿಯ ಗುಣ ಕಂಡ ಜ್ಯೋತಿಷಿ| ಮೋದಿ ತುರ್ತು ನಿರ್ಣಯ ಕೈಗೊಳ್ಳುವಲ್ಲಿ ಸಮರ್ಥರು ಎಂದ ದಾರುವಾಲಾ| ರಾಹುಲ್ ಓರ್ವ ಉತ್ತಮ ನಾಯಕ ಎಂಬ ಹೊಗಳಿಕೆ| ಹುಲಿ ನಾಯಿಗಿಂತ ಬಲಿಷ್ಠ ಎಂದ ಬೇಜಾನ್ ದಾರುವಾಲಾ|

ನವದೆಹಲಿ(ಮೇ.18): ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ. ಯಾರು ಕೇಂದ್ರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದೇ ಇಡೀ ದೇಶಕ್ಕಿರುವ ಕುತೂಹಲ. ಅದರಲ್ಲೂ ಮೋದಿ-ರಾಹುಲ್ ನಡುವೆ ಬಾಜಿ ಕಟ್ಟುವವರ ಸಂಖ್ಯಗೇನೂ ಕೊರತೆಯಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಮಧ್ಯೆ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂಬುದರ ಕುರಿತು ದೇಶದ ಪ್ರಸಿದ್ಧ ಜ್ಯೋತಿಷಿ ಬೇಜಾನ್ ದಾರುವಾಲಾ ಭವಿಷ್ಯ ನುಡಿದಿದ್ದು, ಪ್ರಧಾನಿ ನರೇಂದ್ರ ಮೋದಿಯೇ ಮುಂದಿನ ಪ್ರಧಾನಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಹುಲಿಯ ಗುಣಗಳಿದ್ದು, ಅವರು ಮತ್ತೆ ಈ ದೇಶದ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಬೇಜಾನ್ ದಾರುವಾಲಾ ಹೇಳಿದ್ದಾರೆ. ಮೋದಿ ಅತ್ಯಂತ ಕುಶಾಗ್ರಮತಿ ಎಂದು ಕರೆದಿರುವ ಅವರು, ತುರ್ತು ನಿರ್ಣಯಗಳನ್ನು ಕೈಗೊಳ್ಳಲು ಸಮರ್ಥರು ಎಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೂ ಹೊಗಳಿರುವ ಬೇಜಾನ್ ದಾರುವಾಲಾ, ರಾಹುಲ್ ಗಾಂಧಿ ಅವರಲ್ಲಿ ನಾಯಿಯ ಗುಣಗಳಿವೆ. ಅವರೊಬ್ಬ ಉತ್ತಮ ನಾಯಕ ಎಂದು ಬಣ್ಣಿಸಿದ್ದಾರೆ.

ಆದರೆ ಹುಲಿ ಯಾವಾಗಲೂ ನಾಯಿಗಿಂತ ಬಲಿಷ್ಠವಾಗಿದ್ದು ಹೀಗಾಗಿ ಈ ಬಾರಿಯೂ ಮೋದಿ ಅವರೇ ಪ್ರಧಾನಿ ಕುರ್ಚಿಯನ್ನು ಅಲಂಕರಿಸಲಿದ್ದಾರೆ ಎಂದು ಬೇಜಾನ್ ದಾರುವಾಲಾ ಭವಿಷ್ಯ ನುಡಿದಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.