ಭೋಪಾಲ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಜ್ಞಾ ಸಿಂಗ್ ಠಾಕೂರ್| ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವಿರುದ್ಧ ಪ್ರಜ್ಞಾ ಠಾಕೂರ್ ಸ್ಪರ್ಧೆ| ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮನೋಜ್ ತಿವಾರಿ ಕೂಡ ನಾಮಪತ್ರ| ಮನೋಜ್ ತಿವಾರಿಗೆ ಸಾಥ್ ನೀಡಿದ ಸಪ್ನಾ ಚೌಧರಿ|
ನವದೆಹಲಿ(ಏ.22): 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Scroll to load tweet…
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಪ್ರಗ್ಯಾ ಸಿಂಗ್ ಥಾಕೂರ್ ಅವರು ತಮ್ಮ ಮೂವರು ಬೆಂಬಲಿಗರು ಹಾಗೂ ವಕೀಲರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.
Scroll to load tweet…
ಅತ್ತ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮನೋಜ್ ತಿವಾರಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ಚುನಾವಣಾ ಆಯೋಗದ ಕಚೇರಿಗೆ ಆಗಮಸಿದ ತಿವಾರಿ, ತಮ್ಮ ನಾಮಪತ್ರ ಸಲ್ಲಿಸಿದರು.
Scroll to load tweet…
ಈ ವೇಳೆ ಜನಪ್ರಿಯ ಗಾಯಕಿ ಸಪ್ನಾ ಚೌಧರಿ ಕೂಡ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಸಪ್ನಾ ಚೌಧರಿ, ಮನೋಜ್ ತಿವಾರಿ ನನ್ನ ಸ್ನೇಹಿತರಾದ ಕಾರಣ ಅವರಿಗೆ ಬೆಂಬಲ ಕೋರಿದ್ದೇನೆ ಹೊರತು ಬಿಜೆಪಿ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು.

