ಲೋಕಸಭಾ ಚುನಾವಣೆಗೆ ಮುನ್ನವೇ ರಾಜ್ಯದ ಮೈತ್ರಿ ಸರ್ಕಾರದಲ್ಲಿ ಸಾಕಷ್ಟು ಅಸಮಾಧಾನ ಭುಗಿಲೇಳುತ್ತಿದೆ. ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಹೇಳಿದರು.
ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಮುನ್ನವೇ ರಾಜ್ಯದ ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಿತ್ತಾಟ ಜೋರಾಗಿದೆ. ಚುನಾವಣೆ ಬಳಿಕ ಮೈತ್ರಿ ಸರ್ಕಾರ ನಿರ್ನಾಮವಾಗಲಿದ್ದು, ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಮುಖಂಡ ಕೆ. ಎಸ್.ಈಶ್ವರಪ್ಪ ಹೇಳಿದರು.
Add Asianetnews Kannada as a Preferred Source

ಹುಬ್ಬಳ್ಳಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮುಖಂಡರ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಶೀಘ್ರದಲ್ಲೇ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲಿದೆ.
ಈಗಾಗಲೇ ಜೆಡಿಎಸ್-ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮಧ್ಯೆ ಪರಸ್ಪರ ಅಪನಂಬಿಕೆಯಿದೆ. ತುಮಕೂರಲ್ಲಿ ಕಾಂಗ್ರೆಸ್ನವರು ಸೋಲಿಸುತ್ತಾರೆ ಎಂದು ದೇವೇಗೌಡರಿಗೆ ಭಯ ಶುರುವಾಗಿದೆ. ಇತ್ತ ಮೈಸೂರಲ್ಲಿ ವಿಜಯಶಂಕರ್ ಅವರನ್ನು ಜೆಡಿಎಸ್ ಸೋಲಿಸಲಿದೆ ಎಂದು ಸಿದ್ದರಾಮಯ್ಯ ಭಯಪಡುತ್ತಿದ್ದಾರೆ ಎಂದು ಹೇಳಿದರು.
