ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಸಾಮ್ರಾಜ್ಯ ಸ್ಥಾಪಿಸಿದ ಸಚಿವ ಹಿಮಂತಾ ಬಿಸ್ವಾ ಶರ್ಮಾ| ಲೋಕಸಭಾ ಚುನಾವಣೆಗೆ ಬಿಜೆಪಿ ಕೊಡ್ತು ಬಹುಮಾನ!
ಗುವಾಹಟಿ[ಮಾ.17]: ಈಶಾನ್ಯ ಭಾರತ ಹಾಗೂ ವಿಶೇಷವಾಗಿ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಬೇರು ಬಿಡಲು ಕಾರಣೀಭೂತರಾದ ಅಸ್ಸಾಂ ಸಚಿವ ಹಿಮಂತಾ ಬಿಸ್ವಾ ಶರ್ಮಾ ಅವರಿಗೆ ತಮ್ಮಿಷ್ಟದ ದೇಶದ ಯಾವುದೇ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕಿಳಿಯುವಂತೆ ಬಿಜೆಪಿ ಆಫರ್ ನೀಡಿದೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ರಂಜೀತ್ ದಾಸ್ ಅವರು, ‘2019ರ ಲೋಕಸಭಾ ಚುನಾವಣೆಯಲ್ಲಿ ಸಚಿವ ಹಿಮಂತಾ ಬಿಸ್ವಾ ಶರ್ಮಾ ಅವರಿಗೆ ದೇಶದ ಯಾವುದೇ ಕ್ಷೇತ್ರದಿಂದಲೂ ಕಣಕ್ಕಿಳಿಯುವಂತೆ ಬಿಜೆಪಿ ಹೈಕಮಾಂಡ್ ನನಗೆ ಸೂಚಿಸಿದೆ. ಈ ಸಂದರ್ಭದಲ್ಲಿ ಇದೊಂದು ಒಳ್ಳೇಯ ನಿರ್ಧಾರ. ಆದರೆ, ಬಿಸ್ವಾ ಅವರಿಗೆ ಅಸ್ಸಾಂನಿಂದಲೇ ಟಿಕೆಟ್ ನೀಡುವಂತೆ ಕೇಳಿಕೊಂಡಿದ್ದೇನೆ,’ ಎಂದರು.
ಏತನ್ಮಧ್ಯೆ, ಬಿಸ್ವಾ ಅವರು ತೇಜ್ಪುರ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ. ಆದಾಗ್ಯೂ, ಬಿಜೆಪಿ ರಾಷ್ಟಾ್ರಧ್ಯಕ್ಷ ಅಮಿತ್ ಶಾ ಅವರಿಂದ ಘೋಷಣೆಯಾಗುವುದಷ್ಟೇ ಬಾಕಿಯಿದೆ ಎಂದು ಮೂಲಗಳು ತಿಳಿಸಿವೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 17, 2019, 1:14 PM IST