ಬಿಎಸ್ವೈಗೆ ರಾಜ್ಯಾಧ್ಯಕ್ಷ ಸ್ಥಾನ ಹೋಗುತ್ತೆ : ಹಿರಿಯ ಮುಖಂಡ
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ನಾಯಕರಲ್ಲಿ ಪರಸ್ಪರ ವಾಕ್ಸಮರಗಳು ಜೋರಾಗಿದೆ. ಇದೇ ವೇಳೆ ಕಾಮಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಲೋಕಸಭಾ ಚುನಾವಣೆ ಬಳಿಕ ಯಡಿಯೂರಪ್ಪ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ದಾವಣಗೆರೆ: ಲೋಕಸಭೆ ಚುನಾವಣೆ ನಂತರ ಬಿ.ಎಸ್.ಯಡಿಯೂರಪ್ಪ ಅವರಿಗೆ ಇರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹೋಗಲಿದ್ದು, ಮನೆಗೆ ಹೋಗುತ್ತಾನೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
ಈ ಮೂಲಕ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಗೆದ್ದಾಗಿದೆ ಎಂದು ಹೇಳಿಕೆ ನೀಡಿದ ಬಿಎಸ್ವೈಗೆ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಯಡಿಯೂರಪ್ಪಗೆ ಇರುವ ಸ್ಥಾನವೂ ಹೋಗಲಿದೆ.
ಹೀಗಾಗಿ ಅವರ ಮುಂದಿನ ಜೀವನ ಹೇಗಿರುತ್ತೆ ಅನ್ನುವುದನ್ನು ನೋಡೋಣ. ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾವು ಸಾಮಾನ್ಯ ವ್ಯಕ್ತಿಯನ್ನು ನಿಲ್ಲಿಸಿದ್ದೇವೆ. ನಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.