ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವ ಬೆನ್ನಲ್ಲೇ ಬಿಎಸ್ ಪಿ ನಾಯಕಿ ಮಾಯಾವತಿ ತಮ್ಮ ಆಸೆ ಬಿಚ್ಚಿಟ್ಟಿದ್ದಾರೆ.
ಅಂಬೇಡ್ಕರ್ ನಗರ : ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಬಿಎಸ್ಪಿ ಪರಮೋಚ್ಚ ನಾಯಕಿ ಮಾಯಾವತಿ ಅವರು ಪ್ರಧಾನಿ ಹುದ್ದೆ ಮೇಲೆ ತಮಗಿರುವ ಆಸೆಯನ್ನು ತೆರೆದಿಟ್ಟಿದ್ದಾರೆ.
Add Asianetnews Kannada as a Preferred Source

ನನಗೆ ದೇಶದ ಪ್ರಧಾನಿಯಾಗುವ ಅವಕಾಶ ದೊರೆತರೆ ಉತ್ತರಪ್ರದೇಶದ ಅಂಬೇಡ್ಕರ್ ನಗರ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದಿದ್ದಾರೆ.
ಅದಕ್ಕೆ ಕಾರಣವನ್ನೂ ನೀಡಿ ರಾಷ್ಟ್ರ ರಾಜಕಾರಣದ ರಸ್ತೆ ಅಂಬೇಡ್ಕರ್ ನಗರದ ಮೂಲಕವೇ ಹಾದು ಹೋಗುತ್ತದೆ ಎಂದು ಹೇಳಿದರು.
