ಮೇ.21ಕ್ಕೆ ವಿಪಕ್ಷಗಳ ಮಹತ್ವದ ಸಭೆ| ಸರ್ಕಾರ ರಚನೆ ಸಾಧ್ಯತೆ ಕುರಿತು ಚರ್ಚೆ| ಅತಂತ್ರ ಲೋಕಸಭೆ ರಚನೆಯಾದರೆ ಸರ್ಕಾರ ರಚನೆ ಹಕ್ಕು ಮಂಡಿಸುವ ಸಾಧ್ಯತೆ| ಇಂದು ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ ಮಹತ್ವದ ಚರ್ಚೆ| 

ನವದೆಹಲಿ(ಮೇ.08): ಮೇ.23 ರ ಬಳಿಕ ಸರ್ಕಾರ ರಚನೆ ಸಾಧ್ಯತೆ ಕುರಿತು ಚರ್ಚಿಸಲು ವಿಪಕ್ಷಗಳು ಮೇ.21ರಂದು ಮಹತ್ವದ ಸಭೆ ಕರೆದಿವೆ. ಅತಂತ್ರ ಲೋಕಸಭೆ ರಚನೆಯಾದರೆ ಬಿಜೆಪಿಗೂ ಮೊದಲೇ ರಾಷ್ಟ್ರಪತಿಗಳ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಲಿಸಲು ವಿಪಕ್ಷಗಳು ಚಿಂತನೆ ನಡೆಸಿವೆ ಎನ್ನಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹಿನ್ನೆಲೆಯಲ್ಲಿ ಇಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಲೋಕಸಭಾ ಚುನಾವಣೆ ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆ ಏರ್ಪಡಿಸುವ ಬಗ್ಗೆ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆ. 

ಚುನಾವಣೋತ್ತರ ಮೈತ್ರಿ ರಚನೆ ಮಾಡುವುದಕ್ಕೆ ಸಂಬಂಧಿಸಿದಂತೆ ಮೇ.21 ರ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ