ನಮ್ಮ ನಾಯಕನೇ ಫಸ್ಟ್| ನಾಯಕರಿಗಾಗಿ ಪರಸ್ಪರ ಹೊಡೆದಾಡಿಕೊಂಡ ಬಿಜೆಪಿ ಕಾರ್ಯಕರ್ತರು| ಕಾರ್ಯಕ್ರಮ ಅರ್ಧಕ್ಕೇ ಸ್ಥಗಿತ| ವಿಡಿಯೋ ವೈರಲ್

ಅಜ್ಮೀರ್[ಏ.12]: ಬಿಜೆಪಿ ಕಾರ್ಯಕರ್ತರ ನಡುವೆ ಬಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಮಾತಿಗೆ ಮಾತು ಬೆಳೆದು ಕೊನೆಗೆ ಪರಸ್ಪರ ಹೊಡೆದಾಡಿಕೊಂಡ ರಾಜಸ್ಥಾನದಲ್ಲಿ ನಡೆದಿದೆ. ಸದ್ಯ ದೇಶದ ಅತಿದೊಡ್ಡ ರಾಜಕೀಯ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Add Asianetnews Kannada as a Preferred SourcegooglePreferred

ರಾಜಸ್ಥಾನದ ಅಜ್ಮೀರ್ ನ ಮಸೂದಾದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ಭಾಗರಥ್ ಚೌಧರಿ, ಮಾಜಿ ಶಾಸಕಿಯ ಗಂಡ ಭಂವರ್ ಸಿಂಗ್ ಹಾಗೂ ಪಲಾಡಾ ಹಾಗೂ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿರುವ ನವೀನ್ ಶರ್ಮಾ ಒಂದೇ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಇವರ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Scroll to load tweet…

ವಿವಾದ ಏನು? ಹಾಗೂ ಹೊಡೆದಾಡಿಕೊಳ್ಳಲು ಕಾರಣವೇನು? ಎಂಬುವುದು ಸ್ಪಷ್ಟವಾಗಿಲ್ಲ. ಆದರೆ ಕಾರ್ಯಕ್ರಮದಲ್ಲಿ ನಮ್ಮ ನಾಯಕರೇ ಮೊದಲು ಭಾಷಣ ಮಾಡಬೇಕು ಎಂಬ ವಿಚಾರವಾಗಿ ಜಗಳವಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿವಾದಿಂದ ಕೋಪಗೊಂಡ ಭಗೀರಥ್ ಕೂಡಲೇ ಅಲ್ಲಿಂದ ತೆರಳಿದ್ದಾರೆ. ಸದ್ಯ ಬಿಜೆಪಿ ಜಿಲ್ಲಾಧ್ಯಕ್ಷ ಈ ಕುರಿತು ತನಿಖೆ ಆರಂಭಿಸಿದ್ದಾರೆ.

ಈ ಹೊಡೆದಾಟದ ನಡುವೆ ಕೆಲ ಬಿಜೆಪಿ ನಾಯಕರು ಪರಿಸ್ಥಿತಿ ಶಾಂತರಗೊಳಿಸಲು ಯತ್ನಿಸಿದ್ದಾರೆ. ಇನ್ನು ಈ ಹೈಡ್ರಾಮಾದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನೂ ಸ್ಥಗಿತಗೊಳಿಸಲಾಗಿದೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.