ನಿಖಿಲ್ ಎಲ್ಲಿದ್ಯಪ್ಪ..? ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ
ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾದ ಬಳಿಕ ನಿಖಿಲ್ ಎಲ್ಲಿದ್ಯಪ್ಪ ಎಂಬ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಇದೀಗ ನಿಖಿಲ್ ಎಲ್ಲಿದ್ಯಪ್ಪ ಎನ್ನುವ ಪ್ರಶ್ನೆಗೆ ಸ್ವತಃ ಸಿಎಂ ಕುಮಾರಸ್ವಾಮಿ ಉತ್ತರಿಸಿದ್ದಾರೆ.
ಮಂಡ್ಯ,, (ಏ.14): ಇಂದು [ಬಾನುವಾರ] ಸಿಎಂ ಕುಮಾರಸ್ವಾಮಿ ತಮ್ಮ ಮಗನ ನಿಖಿಲ್ ಪರ ಕೆ.ಆರ್. ನಗರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಪ್ರಚಾರ ನಡೆಸಿದರು.
ಈ ವೇಳೆ ನಿಖಿಲ್ ಎಲ್ಲಿದ್ಯಪ್ಪ, ಎಂದು ಬಹಳ ಚರ್ಚೆಯಾಗ್ತಿದೆ. ಈ ಬಗ್ಗೆ ಸ್ವಲ್ಪ ಮಾತನಾಡಿ ಎಂದು ಓರ್ವ ಯುವಕ ಸಿಎಂಗೆ ಕೇಳಿದ. ಇದಕ್ಕೆ ಪ್ರತಕ್ರಿಯಿಸಿದ ಕುಮಾರಸ್ವಾಮಿ, ನಿಖಿಲ್ ಎಲ್ಲಿದ್ಯಪ್ಪ ಅಂದ್ರೆ ನಮ್ಮ ಹೃದಯಲ್ಲಿದ್ದಾನೆ ಅಂತಾ ಹೇಳಬೇಕು ಎಂದು ಯುವಕರಿಗೆ ತಿಳಿಸಿದರು.
ಯುವಕರು ಈ ಟ್ರೋಲ್ಗಳ ಬಗ್ಗೆ ತಲೆ ಕಡೆಸಿಕೊಳ್ಳಬೇಡಿ. ಆ ಟ್ರೋಲ್ ಮಾಡುವವರು ಯಾರು..? ನಿಖಿಲ್ ಎಲ್ಲಿದ್ಯಪ್ಪ ಎಂದರೆ ನಮ್ಮ ಹೃದಯದಲ್ಲಿದ್ದಾನೆ ಎನ್ನಬೇಕು ತಿಳಿ ಹೇಳಿದರು.
ಇತ್ತೀಚಿನ ದಿನಗಳಲ್ಲಿ ಒಂದು ತಂಡ ಕೆಟ್ಟ ರೀತಿಯಲ್ಲಿ ಈ ರೀತಿ ಬಿಂಬಿಸ್ತಿದೆ. ಈ ರೀತಿಯ ಕೆಟ್ಟ ಅಭಿರುಚಿ ಇಟ್ಟುಕೊಂಡಿರೋದು ಸಮಾಜ ಹಾಳು ಮಾಡುವಂಥದ್ದು. ಇಂತಹವರ ಬಗ್ಗೆ ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದ ಸಿಎಂ ಹೇಳಿದರು.