ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕಡೆ  ಅಂದು ಸಿಎಂ ಆಗಿದ್ದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರು. ತಮ್ಮನ್ನು ಸೋಲಿಸಿದ್ದ ಜಿ.ಟಿ.ದೇವೇಗೌಡ  ಅವರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಚಾಮುಂಡೇಶ್ವರಿಯಿಂದ ಸ್ಪರ್ಧೆ ಮಾಡುವುದಿಲ್ಲ ಎಂಬ ಮಾತನ್ನು ಆಡಿದ್ದಾರೆ.

ಮೈಸೂರು(ಏ. 14) ನಾನು ಮತ್ತೆ ಚಾಮುಂಡೇಶ್ವರಿಯಲ್ಲಿ ಚುನಾವಣೆ ನಿಲ್ಲುವುದಿಲ್ಲ. ನೀವೆಲ್ಲ ಈ ಕ್ಷೇತ್ರವನ್ನ ಅಭಿವೃದ್ಧಿ ಮಾಡಬೇಕು ಎನ್ನುತ್ತ ಬಹಿರಂಗ ವೇದಿಕೆಯಲ್ಲೆ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಹಾಗಾಗಿ ಸೋಲಿನ ಮೂಲಕವೇ ಸಿದ್ದರಾಮಯ್ಯ ಕ್ಷೇತ್ರ ಬಿಟ್ಟು ಕೊಟ್ಟರಾ ಎಂಬ ಪ್ರಶ್ನೆ ಮೂಡಿದೆ. ಜಿಡಿ ದೇವೇಗೌಡ ಮತ್ತು ಸಿದ್ದರಾಮಯ್ಯ ನಡುವೆ ಅಪಸ್ವರಗಳು ಕೇಳಿ ಬಂದಿದ್ದವು. 

ಚಾಮುಂಡೇಶ್ವರಿಯಲ್ಲಿ ಋಣ ಮುಗಿಸಿದ್ರಾ ಸಿದ್ದರಾಮಯ್ಯ? ತಾವು ಚುನಾವಣೆ ನಿಲ್ಲೋಲ್ಲ ಅಂತ ನಿರ್ಧಾರ ಮಾಡಿಯೇ ಜಿ.ಟಿ.ದೇವೇಗೌಡ ಜತೆ ವೇದಿಕೆಯಲ್ಲಿ ಕಾಣಿಸಿಕೊಂಡರಾ? ಎಂಬ ಚರ್ಚೆಗೂ ಮೈಸೂರಿನ ಪ್ರಚಾರ ಕಾರಣವಾಗಿದೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.