ಕೋಲಾರ: ಚುನಾವಣೆಗೂ ಮುನ್ನವೇ 8 ಕಾಂಗ್ರೆಸ್ ಪ್ರಭಾವಿ ಮುಖಂಡರ ಅಮಾನತು
ಕೋಲಾರ ಕಾಂಗ್ರೆಸ್ ಪಾರ್ಟಿಯ 8 ಮಂದಿ ಪ್ರಭಾವಿ ಮುಖಂಡರ ಅಮಾನತ್ತು. | ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಅಮಾನತ್ತುಗೊಳಿಸಿ ಆದೇಶ| ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ವಿರುದ್ದ ಪ್ರಚಾರ ನಡೆಸಿದ್ದ ಹಿನ್ನಲೆಯಲ್ಲಿ ಕ್ರಮ.
ಕೋಲಾರ, (ಏ.17): ರಾಜ್ಯದಲ್ಲಿ ಮೊದಲು ಹಂತದ ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿ ಇರುವಾಗಲೇ ಕೋಲಾರ ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅವರು ಮುಳಬಾಗಿಲು ಜಿಲ್ಲಾ ಪಂಚಾಯಿತಿಯ 3 ಸದಸ್ಯರು ಸೇರಿದಂತೆ 8 ನಾಯಕರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸಿಗರಿಂದ ಬಿಜೆಪಿಗೆ ಬೆಂಬಲ?
ಪಕ್ಷ ವಿರೋಧಿ ಚಟುವಟಿಕೆ ಮತ್ತು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ವಿರುದ್ಧ ಪ್ರಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ.
* ಪ್ರಕಾಶ್ ರಾಮಚಂದ್ರ (ಜಿ.ಪಂಚಾಯಿತಿ ಸದಸ್ಯ) * ನಾಗಮಣಿ (ಜಿ.ಪಂಚಾಯಿತಿ ಸದಸ್ಯೆ) * ಕೃಷ್ಣಪ್ಪ (ಜಿ.ಪಂಚಾಯಿತಿ ಸದಸ್ಯ) * ವಿವೇಕಾನಂದ (ಎಪಿಎಂಸಿ ಸದಸ್ಯ) * ಗಂಗಿ ರೆಡ್ಡಿ (ಪಿಎಲ್ಡಿ ಬ್ಯಾಂಕ್) * ಶ್ರೀನಾಥ್ (ಪಿಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ) * ಶ್ರೀನಿವಾಸ್ (ತಾ.ಪಂಚಾಯಿತಿ ಸದಸ್ಯ) * ಮಂಜುನಾಥ್ (ಎಪಿಎಂಸಿ ಅಧ್ಯಕ್ಷ) ಎನ್ನುವರು ಅಮಾನತುಗೊಂಡಿದ್ದಾರೆ.
ಮಂಡ್ಯದಲ್ಲಿಯೂ ಸಹ ಕಾಂಗ್ರೆಸ್ ಇದೇ ತಂತ್ರವನ್ನು ಅನುಸರಿಸಿತ್ತು. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ನಡೆಸುತ್ತಿದ್ದ ಜಿಲ್ಲೆಯ ಏಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಅಮಾನತುಗೊಳಿಸಿತ್ತು.