ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಇದೇ ಸಂದರ್ಭದಲ್ಲಿ ಯಾರಿಗೆ ಸೋಲು ಯಾರಿಗೆ ಗೆಲುವು ಎನ್ನುವ ಕುತೂಹಲ ಗರಿಗೆದರಿದೆ.
ಜೈಪುರ: ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಗೆಲುವಿನ ಭವಿಷ್ಯ ನುಡಿದಿರುವ ಬೆನ್ನಲ್ಲೇ, ಲೋಕಸಭೆ ಚುನಾವಣೆಯ ಫಲಿತಾಂಶ ಏನೇ ಬಂದರೂ ಅದನ್ನು ನಾವು ವಿಧೇಯತೆಯಿಂದ ಒಪ್ಪಿಕೊಳ್ಳುವುದಾಗಿ ಹಿರಿಯ ಕಾಂಗ್ರೆಸ್ಸಿಗ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅವರ ಈ ಹೇಳಿಕೆ ಫಲಿತಾಂಶ ಪ್ರಕಟಕ್ಕೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ.
ಚುನಾವಣೋತ್ತರ ಸಮೀಕ್ಷೆಗಳು, ರಾಜಸ್ಥಾನದಲ್ಲೂ ಬಿಜೆಪಿ ಕ್ಲೀನ್ಸ್ವೀಪ್ ಮಾಡಲಿದೆ ಎಂದು ಹೇಳಿವೆ. ಅದರ ಬೆನ್ನಲ್ಲೇ ಗೆಹ್ಲೋಟ್ ಈ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
