ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ

ಬೆಳಗಾವಿ[ಮಾ.25]: ಬಿಜೆಪಿಯಿಂದ ಹಾಲಿ ಸಂಸದ ಸುರೇಶ್ ಅಂಗಡಿ ಹಾಗೂ ಕಾಂಗ್ರೆಸ್‌ನಿಂದ ಡಾ.ವಿರೂಪಾಕ್ಷ ಎಸ್. ಸಾಧುನವರ ಸ್ಪರ್ಧಿಸುತ್ತಿದ್ದಾರೆ.

Add Asianetnews Kannada as a Preferred SourcegooglePreferred

ಬೆಳಗಾವಿ ಕೇತ್ರದಲ್ಲಿ ಕಗ್ಗಂಟಾಗಿದ್ದ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಹಲವು ದಿನಗಳನ್ನು ತಳ್ಳಿಕೊಂಡು ಬಂದಿದ್ದ ಕಾಂಗ್ರೆಸ್ ಕೊನೆಗೆ ಶನಿವಾರ ತನ್ನ ಅಧಿಕೃತ ಹುರಿಯಾಳು ಬೈಲಹೊಂಗಲದ ಡಾ.ವಿರೂಪಾಕ್ಷ ಎಸ್. ಸಾಧುನವರ ಎಂದು ಘೋಷಣೆ ಮಾಡಿದೆ.

ನರೇಂದ್ರ ಮೋದಿ ಅಲೆ ಹಾಗೂ ಬಿಜೆಪಿ ಪ್ರಬಲವಾಗಿರುವ ಈ ಕ್ಷೇತ್ರದಲ್ಲಿ ಹೊಸಬ ಡಾ. ವಿರೂಪಾಕ್ಷ ಹೇಗೆ ಪೈಪೋಟಿ ನೀಡುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ