ಕೈ ತಪ್ಪಿದ ಟಿಕೆಟ್ : ಬಿಜೆಪಿ ವಿರುದ್ಧ ನಾಯಕನ ಅಸಮಾಧಾನ
ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗಾಂಧಿ ನಗರ ಟಿಕೆಟ್ ಅಡ್ವಾಣಿಗೆ ನೀಡದಿರುವುದರ ಸಂಬಂಧ ಕೂಡ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ : ಬಿಜೆಪಿ ಹಿರಿಯ ನಾಯಕ ಶತ್ರುಘ್ನ ಸಿನ್ಹಾಗೆ ಇದೀಗ ಪಾಟ್ನಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದೆ.
ಶತ್ರುಘ್ನಾ ಸಿನ್ಹಾ ಬದಲಿಗೆ ರವಿಶಂಕರ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದ್ದು, ಈ ನಿಟ್ಟಿನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಗುಜರಾತ್ ಗಾಂಧಿ ನಗರ ಕ್ಷೇತ್ರದಿಂದ ಈ ಬಾರಿ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಬದಲಿಗೆ ಅಮಿತ್ ಶಾಗೆ ಟಿಕೆಟ್ ನೀಡಲಾಗಿದೆ. ಈ ಬಗ್ಗೆ ಶತ್ರಘ್ನ ಸಿನ್ಹಾ ವಾಗ್ದಾಳಿ ನಡೆಸಿದ್ದು, ಅವರೊಂದಿಗೆ ಎಂದಿಗೂ ಹೊಂದಾಣಿಕೆಯಾಗದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ಇದೊಂದು ಉದ್ದೇಶ ಪೂರ್ವಕವಾಗಿ ಮಾಡಿದ ಕೆಲಸ ಎಂದು ಹೇಳಿದ್ದಾರೆ.
6 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ ವ್ಯಕ್ತಿಗೆ ಟಿಕೆಟ್ ಕೈ ತಪ್ಪಿದೆ ಎಂದು ಅಡ್ವಾಣಿಗೆ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...