ಮತಗಟ್ಟೆ ಬಳಿ ಮತದಾರು ಮೊಬೈಲ್ ಒಯ್ಯಂಗಿಲ್ಲ| ಚುನಾವಣಾ ಆಯೋಗದಿಂದ ಕಟ್ಟುನಿಟ್ಟಿನ ಸೂಚನೆ| ಮತಗಟ್ಟೆ ಅಧಿಕಾರಿಗಳನ್ನ ಹೊರತುಪಡಿಸಿ ಉಳಿದವರು ಮೊಬೈಲ್ ಬಳಸುವಂತಿಲ್ಲ| ಚುನಾವಣಾಧಿಕಾರಿ ಎನ್. ಮಂಜುನಾಥ ಪ್ರಸಾದ್ ಮಾಹಿತಿ| ಕೇಂದ್ರ ಚುನಾವಣಾ ಆಯೋಗದಿಂದ ಸೂಚನೆ ಹಿನ್ನೆಲೆ|

ಬೆಂಗಳೂರು(ಏ.14): ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಏ.18ರಂದು ನಡೆಯಲಿರುವ ಮತದಾನದ ವೇಳೆ ಮತದಾರರು ಮತಗಟ್ಟೆಗಳಿಗೆ ಮೊಬೈಲ್ ತರದಂತೆ ಚುನಾವಣಾ ಆಯೋಗ ತಿಳಿಸಿದೆ.

Add Asianetnews Kannada as a Preferred SourcegooglePreferred

ಚುನಾವಣಾ ಕರ್ತವ್ಯದ ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಚುನಾವಣಾಧಿಕಾರಿ ಎನ್. ಮಂಜುನಾಥ ಪ್ರಸಾದ್, ಕೇಂದ್ರ ಚುನಾವಣಾ ಆಯೋಗದ ಸೂಚನೆ ಇರುವ ಹಿನ್ನೆಲೆಯಲ್ಲಿ ಆದೇಶ ಜಾರಿಗೆ ತರಲಾಗುತ್ತಿದೆ ಎಂಧು ಸ್ಪಷ್ಟಪಡಿಸಿದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.