ಲೋಕಸಭಾ ಟಿಕೆಟ್ ನೀಡಿ - ಇಲ್ಲ ನಷ್ಟ ಎದುರಿಸಿ : ಬಿಜೆಪಿ ನಾಯಕ ವಾರ್ನಿಂಗ್
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದ್ದು, ಬಿಜೆಪಿ ತಮಗೆ ಟಿಕೆಟ್ ನೀಡಲಿ, ಇಲ್ಲ ಮುಂದಿನ ನಡೆ ಎದುರಿಸಲಿ ಎಂದು ಬಿಜೆಪಿ ನಾಯಕರೋರ್ವರು ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಹಲವು ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನವು ಭುಗಿಲೇಳುತ್ತಿದೆ.
ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಅಜಯ್ ಅಗರ್ವಾಲ್ ಇದೀಗ ಮತ್ತೊಮ್ಮೆ ಬಿಜೆಪಿಯಿಂದ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದಾರೆ.
ಈ ಬಾರಿ ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಕೂಡ ಸ್ಪರ್ಧೆ ಮಾಡುವ ಸಾಧ್ಯತೆ ಇದ್ದು, ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕ್ಷೇತ್ರದಿಂದ ಚುನಾವನೆ ಎದುರಿಸಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಸುದ್ದಿಯಾಗುತ್ತಿವೆ.
ಕಳೆದ ಚುನಾವಣೆಯಲ್ಲಿ ಸೋನಿಯಾ ವಿರುದ್ಧ 1.73 ಲಕ್ಷ ಮತ ಪಡೆದಿದ್ದು, ಈ ಬಾರಿ ಟಿಕೆಟ್ ನೀಡಬೇಕೆಂದಿದ್ದಾರೆ. ಇಲ್ಲವಾದಲ್ಲಿ ಪಕ್ಷ ಮುಂದಿನ ನಡೆಯನ್ನು ಎದುರಿಸಲು ಸಿದ್ಧವಾಗಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಹಾಗೂ ಕೇಂದ್ರದ ನಾಯಕರಿಂದ ತಮಗೆ ಯಾವುದೇ ರೀತಿಯ ಬೆಂಬಲ ದೊರಕಲಿಲ್ಲ. ಈ ನಿಟ್ಟಿನಲ್ಲಿ ಸೋಲು ಕಾಣಬೇಕಾಯ್ತು.
ಈ ಬಾರಿ ಟಿಕೆಟ್ ನೀಡದಿದ್ದಲ್ಲಿ ಬಿಜೆಪಿ ಭಾರೀ ಮೊತ್ತದ ನಷ್ಟ ಅನುಭವಿಸುವುದು ಖಚಿತ. ಅಲ್ಲದೇ ವೈಶ್ಯ ಸಮುದಾಯದ ವಿರೋಧವನ್ನು ಎದುರಿಸುವುದು ಖಚಿತ ಎಂದಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...