Asianet Suvarna News Asianet Suvarna News

ಚುನಾವಣಾ ಪ್ರಚಾರ ಸಭೆಗೆ ತೆರಳುತ್ತಿದ್ದ ಐವರು ಬಿಜೆಪಿ ಕಾರ್ಯಕರ್ತರು ಸಾವು

ಲೋಕಸಭಾ ಚುನಾವಣಾ ಪ್ರಚಾರ ಸಮಾವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಿಜೆಪಿಯ ಐವರು ಕಾರ್ಯಕರ್ತ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

Five BJP Workers Dead After Car Falls Into Gorge In Himachal Pradesh
Author
Bengaluru, First Published May 5, 2019, 10:21 PM IST

ಶಿಮ್ಲಾ, [ಮೇ.05]: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್​ ಠಾಕೂರ್​ ಅವರ ಪ್ರಚಾರದ ಸಮಾವೇಶಕ್ಕೆ ಹೋಗುತ್ತಿದ್ದ ಐವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್​ ಠಾಕೂರ್​ ಅವರು ಇಂದು ಭಟಕಿದರ್​ ಗ್ರಾಮದಲ್ಲಿ ಏರ್ಪಡಿಸಿದ್ದರು. ಈ ಸಭೆಗೆ ಕಾರಿನಲ್ಲಿ ಹೊರಟಿದ್ದ ಐವರು ಬಿಜೆಪಿ ಕಾರ್ಯಕರ್ತ ಪ್ರಯಾಣಿಸುತ್ತಿದ್ದ ಕಾರು ಮಂಡಿ ಜಿಲ್ಲೆಯ ಬಾಗಾ ಚಾನೋಗಿ ಬಳಿ 300 ಮೀಟರ್​ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು,  ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಚಾಲಕ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ, ಕಾಂಗ್ರಾ, ಹಮೀರ್ಪುರ್​, ಶಿಮ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಮೇ 19ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ.

Follow Us:
Download App:
  • android
  • ios