'ಈ ಚುನಾವಣೆಯಲ್ಲಿ ದೇವೇಗೌಡರ ಸೋಲು ಖಚಿತ'
ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ, (ಏ.21): ಈ ಚುನಾವಣೆಯಲ್ಲಿ ದೇವೇಗೌಡರ ಸೋಲು ಖಚಿತ ಎಂದು ಬಿಜೆಪಿ ಶಾಸಕ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರಿಗೆ ತುಮಕೂರಿನ ಜನ ತಕ್ಕ ಪಾಠ ಕಲಿಸಲಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ಸೋಲು ಖಚಿತ ಎಂದರು.
ಕುಮಾರಸ್ವಾಮಿಯವರು ತಮ್ಮ ಮಗನ ಭವಿಷ್ಯದ ಬಗ್ಗೆಯೇ ಚಿಂತನೆಯಲ್ಲಿದ್ದಾರೆ ವಿನಃ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನಹರಿಸಲೇ ಇಲ್ಲ. .ಕುಮಾರಸ್ವಾಮಿಯವರಿಗೆ ತಾವು ರಾಜ್ಯದ ಮುಖ್ಯಮಂತ್ರಿ ಎಂಬ ಪರಿಜ್ಞಾನವಿದೆಯಾ ? ಮೈತ್ರಿ ಸರ್ಕಾರ ಅಲ್ಪಾಯಸ್ಸಿನ ಸರ್ಕಾರವಾಗಿದೆ. ಮೇ 23 ರ ನಂತರ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಜಾತ್ಯಾತೀತ ಪಕ್ಷವಾ ಅಥವಾ ಜಾತಿ ರಹಿತ ಪಕ್ಷವಾ ಅನ್ನೋದು ಗೊತ್ತಾಗ್ತಿಲ್ಲ. ರಾಜ್ಯದಲ್ಲಿ ಈ ಭಾರಿ ಮೋದಿ ಅಲೆ ಹೆಚ್ಚಾಗಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ನರೇಂದ್ರ ಮೋದಿಯವರು ಭಾರತವನ್ನ ಅಗ್ರಗಣ್ಯ ರಾಷ್ಟ್ರವನ್ನಾಗಿ ಬದಲಾವಣೆಯತ್ತ ಕೊಂಡೊಯ್ಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.