ಕಾಂಗ್ರೆಸ್ ಮುಖಂಡರೋರ್ವರು ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಇದೀಗ ಎಲ್ಲೆಡೆ ಹಬ್ಬಿದ್ದು, ಈ ಸಂಬಂಧ ಇದೀಗ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ತಾವು ಪಕ್ಷವನ್ನು ಬಿಡುವ ಸುದ್ದಿ ಕೇವಲ ಊಹಾ ಪೋಹಾ ಎಂದಿದ್ದಾರೆ.
ನವದೆಹಲಿ: ‘ನಾನು ಬಿಜೆಪಿ ಸೇರ್ಪಡೆಯಾಗುವುದಾಗಿ ಹರಿದಾಡುತ್ತಿರುವ ಸುದ್ದಿ ಬರೀ ಊಹಾಪೋಹದಿಂದ ಕೂಡಿದೆ’ ಎಂದು ಉತ್ತರಪ್ರದೇಶದ ಕಾಂಗ್ರೆಸ್ ಮುಖಂಡ ಜಿತಿನ್ ಪ್ರಸಾದ್ ಹೇಳಿದ್ದಾರೆ.
ಜಿತಿನ್ ಬಿಜೆಪಿ ಸೇರಲಿದ್ದಾರೆ ಎಂಬ ಮಾಧ್ಯಮ ವರದಿಗಳಿಗೆ ಉತ್ತರಿಸಿದ ಅವರು, ‘ಬರೀ ಊಹಾಪೋಹದ ಪ್ರಶ್ನೆಗಳಿಗೆ ನಾನು ಏಕೆ ಉತ್ತರಿಸಬೇಕು?’ ಎಂದು ಸುದ್ದಿಗಾರರಿಗೇ ಮರುಪ್ರಶ್ನೆ ಹಾಕಿದರು.
45 ವರ್ಷದ ಪ್ರಸಾದ ಅವರು ಯುಪಿಎ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದರು. ಅವರಿಗೆ ಉತ್ತರಪ್ರದೇಶದ ಧೌಹಾರ್ಹಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಆದರೆ ಕೆಲವು ವಿಷಯಗಳ ಬಗ್ಗೆ ಅವರು ಪಕ್ಷದಲ್ಲಿ ಅಸಮಾಧಾನ ಹೊಂದಿದ್ದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. 2000ನೇ ಇಸವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಎದುರು ನಿಂತು ಇವರ ತಂದೆ ಜಿತೇಂದ್ರ ಪ್ರಸಾದ್ ಸೋತಿದ್ದರು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 23, 2019, 10:27 AM IST