ಹಣ ಹಂಚುತ್ತಿದ್ದಾಗ ಐಟಿಗೆ ಸಿಕ್ಕಿಬಿದ್ದ ಜೆಡಿಎಸ್ ಮುಖಂಡನ ಪುತ್ರ!
ಐಟಿ ಬಲೆಗೆ ಬಿದ್ದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಅಪ್ಪಾಜಿ ಗೌಡ ಪುತ್ರ| ಮತದಾರರಿಗೆ ಹಣ ಹಂಚುತ್ತಿದ್ದಾಗ ಸಿಕ್ಕಿಬಿದ್ದ ಅಜಿತ್ ಕುಮಾರ್| ಭದ್ರಾವತಿಯ ಎಂಪಿಎಂ ಬಳಿಯ ಸುರಗಿ ತೋಪಿನಲ್ಲಿ ಹಣ ಹಂಚಿಕೆ| 1.39 ಲಕ್ಷ ರೂ. ನಗದು ಹಣ ಜಪ್ತಿ ಮಾಡಿದ ಅಧಿಕಾರಿಗಳು|
ಶಿವಮೊಗ್ಗ(ಏ.22): ಮಾಜಿ ಶಾಸಕ, ಜೆಡಿಎಸ್ ಮುಖಂಡ ಅಪ್ಪಾಜಿ ಗೌಡ ಅವರ ಪುತ್ರ ಅಜಿತ್ ಕುಮಾರ್ ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಭದ್ರಾವತಿಯ ಎಂಪಿಎಂ ಬಳಿಯ ಸುರಗಿ ತೋಪಿನಲ್ಲಿ ಅಜಿತ್ ಕುಮಾರ್ ಹಣ ಹಂಚುತ್ತಿದ್ದರು. ಈ ಕುರಿತು ಐಟಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಸಿಕ್ಕಿತ್ತು.
ಕೂಡಲೇ ಎಂಪಿಎಂ ಠಾಣೆಯ ಪೊಲೀಸರ ಸಹಕಾರದಿಂದ ದಾಳಿ ಮಾಡಿದ ಅಧಿಕಾರಿಗಳು 1.39 ಲಕ್ಷ ರೂ. ನಗದು ಹಣವನ್ನು ಜಪ್ತಿ ಮಾಡಿದ್ದಾರೆ.