Asianet Suvarna News Asianet Suvarna News

ಹಣ ಹಂಚುತ್ತಿದ್ದಾಗ ಐಟಿಗೆ ಸಿಕ್ಕಿಬಿದ್ದ ಜೆಡಿಎಸ್ ಮುಖಂಡನ ಪುತ್ರ!

ಐಟಿ ಬಲೆಗೆ ಬಿದ್ದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಅಪ್ಪಾಜಿ ಗೌಡ ಪುತ್ರ| ಮತದಾರರಿಗೆ ಹಣ ಹಂಚುತ್ತಿದ್ದಾಗ ಸಿಕ್ಕಿಬಿದ್ದ ಅಜಿತ್ ಕುಮಾರ್| ಭದ್ರಾವತಿಯ ಎಂಪಿಎಂ ಬಳಿಯ ಸುರಗಿ ತೋಪಿನಲ್ಲಿ ಹಣ ಹಂಚಿಕೆ| 1.39 ಲಕ್ಷ ರೂ. ನಗದು ಹಣ ಜಪ್ತಿ ಮಾಡಿದ ಅಧಿಕಾರಿಗಳು|

JDS Leader Son Distributing Money Caught By IT
Author
Bengaluru, First Published Apr 22, 2019, 10:13 PM IST

ಶಿವಮೊಗ್ಗ(ಏ.22): ಮಾಜಿ ಶಾಸಕ, ಜೆಡಿಎಸ್ ಮುಖಂಡ ಅಪ್ಪಾಜಿ ಗೌಡ ಅವರ ಪುತ್ರ ಅಜಿತ್ ಕುಮಾರ್ ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಭದ್ರಾವತಿಯ ಎಂಪಿಎಂ ಬಳಿಯ ಸುರಗಿ ತೋಪಿನಲ್ಲಿ ಅಜಿತ್ ಕುಮಾರ್ ಹಣ ಹಂಚುತ್ತಿದ್ದರು. ಈ ಕುರಿತು ಐಟಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಸಿಕ್ಕಿತ್ತು. 

ಕೂಡಲೇ ಎಂಪಿಎಂ ಠಾಣೆಯ ಪೊಲೀಸರ ಸಹಕಾರದಿಂದ ದಾಳಿ ಮಾಡಿದ ಅಧಿಕಾರಿಗಳು 1.39 ಲಕ್ಷ ರೂ. ನಗದು ಹಣವನ್ನು ಜಪ್ತಿ ಮಾಡಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

Follow Us:
Download App:
  • android
  • ios