ಬಿಜೆಪಿ ಅಭ್ಯರ್ಥಿ ಎ.ಮಂಜು ಭೇಟಿ : ಜೆಡಿಎಸ್ ತೊರೆಯಲು ಮುಂದಾದ ಮುಖಂಡರು?
ಲೋಕಸಭಾ ಚುನಾವಣೆ ಸಮೀಪಿಸಿದ್ದು, ಇದೇ ವೇಳೆ ಹಾಸನ ಜೆಡಿಎಸ್ ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದೇ ವೇಳೆ JDS ನಾಯಕರು ಬಿಜೆಪಿ ಅಭ್ಯರ್ಥಿ ಎ ಮಂಜು ಭೇಟಿಯಾಗಿದ್ದಾರೆ.
ಹಾಸನ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಹಾಸನದಲ್ಲಿ ದೇವೇಗೌಡರ ಕುಟುಂಬದ ವಿರುದ್ಧ ಅಸಮಾಧಾನ ಹೆಚ್ಚಾಗುತ್ತಿದೆ.
ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ ಎಂದು ಹಾಸನದಿಂದ ಪ್ರಜ್ವಲ್ ಸ್ಪರ್ಧೆಗೆ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗುತ್ತಿದೆ.
ಪ್ರಜ್ವಲ್ ಸ್ಪರ್ಧೆ ಕಾರಣಕ್ಕಾಗಿ ಮುನಿಸಿಕೊಂಡ ಜೆಡಿಎಸ್ ಕಾರ್ಯಕರ್ತರು ಮುನಿಸಿಕೊಂಡಿದ್ದು, ಇದೇ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಯಾಗಿರುವ ಡ. ಮಂಜು ಭೇಟಿ ಮಾಡುತ್ತಿದ್ದಾರೆ.
ಅಲ್ಲದೇ ಜೆಡಿಎಸ್ ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಹಾಸನ ಅಭ್ಯರ್ಥಿಯಾಗಿರುವ ಎ ಮಂಜುಗೆ ಬೆಂಬಲ ನೀಡಲಿದ್ದಾರೆ ಎನ್ನಲಾಗಿದೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...