ತುಮಕೂರಿನಲ್ಲಿ ದೋಸ್ತಿ ಅಭ್ಯರ್ಥಿ ಮಾಜಿ ಪ್ರಧಾನಿ ದೇವೇಗೌಡರ ಪರವಾಗಿ ಘಟಾನುಘಟಿಗಳೇ ಅಖಾಡಕ್ಕಿಳಿದು ಪ್ರಚಾರ ಮಾಡುತ್ತಿದ್ದಾರೆ. ಆದರೆ ತಳ ಮಟ್ಟದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಏನೇ ಮಾಡಿದರೂ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ ಎಂಬುದಕ್ಕೆ ಉದಾಹರಣೆ ಸಿಕ್ಕಿತ್ತು. ಆದರೆ ಅಂತಿಮ ಕ್ಷಣದಲ್ಲಿ ರೆಬಲ್ ಗಳು  ಆಗಮಿಸಿದ್ದಾರೆ.

ತುಮಕೂರು[ಏ. 10]  ಜೆಡಿಎಸ್ ಅಭ್ಯರ್ಥಿ ಎಚ್‌.ಡಿ.ದೇವೇಗೌಡ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆದಿಯಾಗಿ ನಾಯಕರು ಬುಧವಾರ ಪ್ರಚಾರ ಕೈಗೊಂಡಿದ್ದರೆ ತುಮಕೂರಿನ ಇಬ್ಬರು ನಾಯಕರು ಮಾತ್ರ ಬೆಳಗ್ಗೆಯಿಂದ ಅಂತರ ಕಾಯ್ದುಕೊಂಡಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆ.ಎನ್.ರಾಜಣ್ಣ ಮತ್ತು ಟಿಕೆಟ್ ವಂಚಿತ ಸಂಸದ ಮುದ್ದಹನುಮೇಗೌಡ ಪ್ರಚಾರ ಕಾರ್ಯದಲ್ಲಿ ಇರಲಿಲ್ಲ. ಮಧುಗಿರಿಯಲ್ಲಿ ನಡೆಯುವ ಪ್ರಚಾರ ಸಭೆಯ ತಯಾರಿಯಲ್ಲಿಯೂ ರಾಜಣ್ಣ ಸಕ್ರಿಯವಾಗಿ ಕಾಣಿಸಿಕೊಂಡಿಲ್ಲ. ಆದರೆ ಸಂಜೆ ವೇಳೆಗೆ ಹಿರಿಯ ನಾಯಕರನ್ನು ಇಬ್ಬರು ಸೇರಿಕೊಂಡಿದ್ದಾರೆ.

'ನಾನು ಗೆದ್ದು ದೆಹಲಿಗೆ ಹೋಗ್ತಿನಾ, ಇಲ್ಲವಾ? ಗೊತ್ತಿಲ್ಲ' ಎಂದ HDD

ತಿಪಟೂರು, ‌ಚಿಕ್ಕನಾಯಕನಹಳ್ಳಿ ಸಭೆಯಲ್ಲಿ ರಾಜಣ್ಣ, ಮುದ್ದಹನುಮೇಗೌಡ ಇರಲಿಲ್ಲ. ದೇವೇಗೌಡರರಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಸಚಿವ ಎಸ್ .ಆರ್.ಶ್ರೀನಿವಾಸ್, ಮಾಜಿ ಸಚಿವ ಟಿ.ಬಿ ಜಯಚಂದ್ರ, ಚಿಕ್ಕನಾಯಕನಹಳ್ಳಿ ಮಾಜಿ ಶಾಸಕ ಸುರೇಶ್ ಬಾಬು ಹಾಗೂ ಮಾಜಿ ಸಚಿವ ಸಿಎಂ ಇಬ್ರಾಹಿಂ ಸಾಥ್ ನೀಡಿದ್ದರು. ಆದರೆ ಮಧುಗಿರಿ ಸಮಾವೇಶದ ವೇಳೆಗೆ ಇಬ್ಬರು ನಾಯಕರು ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.