ಚುನಾವಣಾ ಲಾಭಕ್ಕಾಗಿ ಮೈತ್ರಿ ಸರ್ಕಾರದಿಂದ ಆಡಳಿತ ಯಂತ್ರ ದುರ್ಬಳಕೆ ಆರೋಪ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್- ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಸರ್ಕಾರಿ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೈತ್ರಿ ಸರ್ಕಾರವು ಆಡಳಿತ ಯಂತ್ರವನ್ನು ದುರ್ಬಳಕೆ ಮಾಡುತ್ತಿದೆ. ಸ್ವಚ್ಚ ಮತ್ತು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಪಕ್ಷಪಾತಿ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು, ಸಂಸದ ರಾಜೀವ್ ಚಂದ್ರಶೇಖರ್ ಮತ್ತು ಶಾಸಕ ಸುರೇಶ್ ಕುಮಾರ್ ನಿಯೋಗ ಮನವಿ ಮಾಡಿದೆ.
Scroll to load tweet…
Scroll to load tweet…
ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲನೇ ಹಂತದ ಮತದಾನ 18 ಏಪ್ರಿಲ್, ಹಾಗೂ ಎರಡನೇ ಹಂತದ ಮತದಾನ 23 ಏಪ್ರಿಲ್ ರಂದು ನಡೆಯಲಿದೆ. ಮೇ. ೨೩ಕ್ಕೆ ಫಲಿತಾಂಶಗಳು ಪ್ರಕಟವಾಗಲಿದೆ. ಮೊದಲನೇ ಹಂತಕ್ಕೆ ಈಗಾಗಲೇ ನಾಮಪತ್ರ ಸಲ್ಲಿಸುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ.
