ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಐಎಎಸ್ ಅಧಿಕಾರಿಯೋರ್ವರನ್ನು ಸಸ್ಪೆಂಡ್ ಮಾಡಲಾಗಿದೆ. 

ಭುವನೇಶ್ವರ: ಒಡಿಶಾದಲ್ಲಿ ಲೋಕಸಭಾ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೂಲದ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸೀನ್‌ ಅವರನ್ನು ಕರ್ತವ್ಯ ಲೋಪದ ಆಧಾರದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

Add Asianetnews Kannada as a Preferred SourcegooglePreferred

ಸಂಬಾಲ್‌ಪುರ ಜಿಲ್ಲೆಯಲ್ಲಿ ವೀಕ್ಷಕರಾಗಿ ನೇಮಕಗೊಂಡಿದ್ದ ಮೊಹ್ಸೀನ್‌ ಅವರ ನೇತೃತ್ವದ ತಂಡವು, ಏ.16ರಂದು ಎಸ್‌ಪಿಜಿ ಭದ್ರತೆ ಹೊಂದಿದ್ದ ರಾಜಕೀಯ ನಾಯಕರೊಬ್ಬರ ಹೆಲಿಕಾಪ್ಟರ್‌ ಅನ್ನು ತಪಾಸಣೆಗೆ ಗುರಿಪಡಿಸಿದ್ದರು. ಇದು ಎಸ್‌ಪಿಜಿ ಭದ್ರತೆ ಹೊಂದಿದ್ದ ನಾಯಕರಿಗೆ ನೀಡಿದ ಭದ್ರತಾ ಮಾರ್ಗಸೂಚಿಗಳಿಗೆ ವಿರುದ್ಧವಾಗಿತ್ತು. 

ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಘಟನೆ ಕುರಿತು ಚುನಾವಣಾ ಆಯೋಗಕ್ಕೆ ವರದಿ ನೀಡಿದ್ದರು. ಈ ವರದಿ ಆಧರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮೊಹ್ಸೀನ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಆಯೋಗ ಪ್ರಕಟಣೆ ಹೊರಡಿಸಿದೆ.