ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಈ ಬಾರಿ ಸಚಿವರ ಕಿತ್ತಾಟವನ್ನು ತಮ್ಮದೆ ಶೈಲಿಯಲ್ಲಿ ಟೀಕಿಸಿದ್ದಾರೆ. ಈಶ್ವರಪ್ಪ ದಾಳಿಗೆ ಸಿಕ್ಕವರು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಎಂ.ಬಿ.ಪಾಟೀಲ್.
ಶಿವಮೊಗ್ಗ [ಏ. 14] ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ. ಪಾಟಿಲ್, ದಾರಿಯಲ್ಲಿ ಹೋಗುವ ಕುಡುಕರ ರೀತಿಯಲ್ಲಿ ಬಡಿದಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
Add Asianetnews Kannada as a Preferred Source

ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ. ಪಾಟಿಲ್ ರೀತಿ ಕುಡುಕರು ಬಡಿದಾಡುವುದಿಲ್ಲ. ಜಾತಿ ವಿಚಾರ ಇವರಿಬ್ಬರ ಸ್ವತ್ತಾ? ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಒಂದು ಕಡೆ ಶಿವಕುಮಾರ್ ಕ್ಷಮೆ ಕೇಳುತ್ತೆನೆ ಎಂದು ಹೇಳುತ್ತಾರೆ. ಮತ್ತೊಂದು ಕಡೆ, ಕ್ಷಮೆ ಕೇಳೋಕೆ ಇವನ್ಯಾವನು ಎಂದು ಎಂ.ಬಿ. ಪಾಟಿಲ್ ಹೇಳುತ್ತಾರೆ. ಒಂದೆ ಪಕ್ಷದ ಮುಖಂಡರು ನಾಯಕರು ಬಡಿದಾಡುತ್ತಿರುವುದು ತೀರಾ ಅಪಮಾನ ಎಂದು ಕಿಡಿ ಕಾರಿದ್ದಾರೆ.
ನಾವು ಸೋತ್ರೆ ಸರ್ಕಾರ ಇರುತ್ತಾ?: ಸಿದ್ದರಾಮಯ್ಯ ಈ ಮಾತಿನ ಮರ್ಮವೇನು..?
ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಹೊಂದಾಣಿಕೆ ಎಂಬುದು, ಕೆಳಮಟ್ಟದಲ್ಲೂ ಇಲ್ಲ. ಮೇಲ್ಮಟ್ಟದಲ್ಲೂ ಇಲ್ಲ. ಶಿವಮೊಗ್ಗ ಸೇರಿದಂತೆ, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಎಲ್ಲೂ ಆಗಿಯೇ ಇಲ್ಲ.
