Asianet Suvarna News Asianet Suvarna News

ಮೈತ್ರಿ ಅಭ್ಯರ್ಥಿಗಾಗಿ ಟ್ರಬಲ್ ಶೂಟರ್ ಭರ್ಜರಿ ಪ್ರಚಾರ

ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಉಳಿದಿದೆ. ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್  ಇತ್ತ ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರಕ್ಕೆ ಇಳಿದಿದ್ದಾರೆ. 

Lok Sabha Elections 2019 DK Shivakumar Campaign For Veerappa Moily in Chikkaballapur
Author
Bengaluru, First Published Apr 11, 2019, 8:19 AM IST

ನೆಲಮಂಗಲ: ದೇಶದಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ಸಲುವಾಗಿ ಮೈತ್ರಿ ಮಾಡಿ ಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. 

ರಾಜ್ಯದ ಎಲ್ಲಾ ಮೈತ್ರಿ ಅಭ್ಯರ್ಥಿಗಳನ್ನು ಚುನಾಯಿಸುವಂತೆ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಎಂ. ವೀರಪ್ಪ ಮೊಯ್ಲಿ ಪರ ಮತ ಯಾಚನೆ ಮಾಡಿದರು. 

ಬುಧವಾರ ಸಂಜೆ ನೆಲಮಂಗಲ ಪಟ್ಟಣದ ಬಿ.ಎಚ್. ರಸ್ತೆಯ ಟೌನ್ ಪೊಲೀಸ್ ಠಾಣೆಯ ಸನಿಹದ ಅಂಬೇಡ್ಕರ್ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೂ ರೋಡ್‌ಶೋ ನಡೆಸಿದ ಡಿಕೆಶಿ, ಕೋಮುವಾದಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡಲು ಮೈತ್ರಿ ಅಗತ್ಯವಿತ್ತು ಎಂದರು.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

Follow Us:
Download App:
  • android
  • ios