ಲೋಕಸಭಾ ಚುನಾವಣೆಗೆ ಎಲ್ಲೆಡೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇತ್ತ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಓರ್ವರಿಗೆ ಭದ್ರತೆ ನೀಡಲು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. ಮತದಾನಕ್ಕೆ ಒಂದೇ ದಿನ ಬಾಕಿ ಉಳಿದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಸೂಕ್ತ ಭದ್ರತೆಗೆ ಕೇಂದ್ರ ಭದ್ರತಾ ಪಡೆ ಸೇರಿ 50 ಪೊಲೀಸರನ್ನು ನಿಯೋಜಿಸ ಲಾಗಿದೆ.
ಅಲ್ಲದೇ ಮಂಡ್ಯದಲ್ಲೇ ದಕ್ಷಿಣ ವಲಯ ಐಜಿಪಿ ಅವರು ಮೊಕ್ಕಾಂ ಹೂಡಿ ಆ ಕ್ಷೇತ್ರದ ಭದ್ರತೆ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಎಡಿಜಿಪಿ ಕಮಲ್ ಪಂತ್ ತಿಳಿಸಿದರು. ಚುನಾವಣಾ ಆಯೋಗಕ್ಕೆ ಭದ್ರತೆ ಕೋರಿ ಸುಮಲತಾ ಮನವಿ ಮಾಡಿದ್ದರು.
