ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಪರಸ್ಪರ ವಾಕ್ಸಮರಗಳು ಜೋರಾಗಿವೆ. ಇದೀಗ ಬಿಜೆಪಿ ಅಭ್ಯರ್ಥಿ ಎ. ಮಂಜು ಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಾಸನ/ಹೊಳೆನರಸೀಪುರ: ‘9’ ಅನ್ನೋದು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಕಂಟಕವಾಗಲಿದೆ ಎಂದು ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪುನರುಚ್ಚಾರ ಮಾಡಿದ್ದಾರೆ.
Add Asianetnews Kannada as a Preferred Source

ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ನಡೆದ ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 1989, 1999 ರಲ್ಲಿ ದೇವೇಗೌಡರಿಗೆ ಸೋಲಾಗಿತ್ತು.
2019 ರಲ್ಲಿಯೂ ದೇವೇಗೌಡರಿಗೆ ಮತ್ತು ಅವರ ಮೊಮ್ಮಕ್ಕಳಿಗೆ ಸೋಲಾಗಲಿದೆ. ಈ ಬಾರಿ ಲೋಕಸಭಾ ಚುನಾವಣಾ ದಿನಾಂಕ ಕೂಡ 18 ರಂದು ಬಂದಿದೆ. 8+1 ರಲ್ಲೂ 9 ಇದೆ. ಹೀಗಾಗಿ ಅವರಿಗೆ 9 ಅನ್ನೋದು ಕಂಟಕವಾಗಿದೆ ಎಂದರು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
