ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಟಿಕೆಟ್ ನೀಡುವ ವಿಚಾರವೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ ಬಿಜೆಪಿ 10 ಸಂಸದರಿಗೆ ಈ ರಾಜ್ಯದಲ್ಲಿ ಟಿಕೆಟ್ ಕಟ್ ಮಾಡಲಾಗಿದೆ.
ನವದೆಹಲಿ: ಇತ್ತೀಚೆಗಷ್ಟೇ ನಡೆದ ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎದುರು ಸೋತು ಸುಣ್ಣವಾಗಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್, ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 10 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ.
ಅದರ ಬದಲು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಬಿಜೆಪಿ ಘೋಷಣೆ ಮಾಡಿದೆ.
ಈ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಮುಖಂಡರನ್ನೊಳಗೊಂಡ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿಯು ಮಂಗಳವಾರ ಸಭೆ ನಡೆಸಿತು. ಈ ಸಭೆ ಬಳಿಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಜೈನ್ ಅವರು ಈ ಘೋಷಣೆ ಮಾಡಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 20, 2019, 11:12 AM IST