ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಟಿಕೆಟ್ ನೀಡುವ ವಿಚಾರವೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ ಬಿಜೆಪಿ 10 ಸಂಸದರಿಗೆ ಈ ರಾಜ್ಯದಲ್ಲಿ ಟಿಕೆಟ್ ಕಟ್ ಮಾಡಲಾಗಿದೆ.
ನವದೆಹಲಿ: ಇತ್ತೀಚೆಗಷ್ಟೇ ನಡೆದ ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎದುರು ಸೋತು ಸುಣ್ಣವಾಗಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್, ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 10 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ.
Add Asianetnews Kannada as a Preferred Source

ಅದರ ಬದಲು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಬಿಜೆಪಿ ಘೋಷಣೆ ಮಾಡಿದೆ.
ಈ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಮುಖಂಡರನ್ನೊಳಗೊಂಡ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿಯು ಮಂಗಳವಾರ ಸಭೆ ನಡೆಸಿತು. ಈ ಸಭೆ ಬಳಿಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಜೈನ್ ಅವರು ಈ ಘೋಷಣೆ ಮಾಡಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
