ರಾಜಕೀಯದ ಬಗ್ಗೆ ಮತ್ತೊಂದು ಸುಳಿವು ನೀಡಿದ ಸಿದ್ದರಾಮಯ್ಯ
ಲೋಕಸಭಾ ಚುನಾವಣೆಗೆ ಬಿರುಸಿನ ಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ಇನ್ನು ಚಾಮುಂಡೇಶ್ವರಿಯಿಂದ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದು, ಇದೀಗ ರಾಜಕೀಯ ಹೊಸ ಸುಳಿವು ನೀಡಿದ್ದಾರೆ.
ಮೈಸೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಪರಾಭವ ಅನುಭವಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಈ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಬಳಿಕ ಇದೀಗ ತಮ್ಮ ರಾಜಕೀಯದ ಬಗ್ಗೆ ಮತ್ತೊಂದು ಹೊಸ ಸುಳಿವು ನೀಡಿದ್ದಾರೆ.
ಆದರೆ ತಾವು ಚಾಮುಂಡೇಶ್ವರಿಯಿಂದ ಮಾತ್ರವೇ ಸ್ಪರ್ಧೆ ಮಾಡುವುದಿಲ್ಲ. ಆದರೆ ಬೇರೆ ಕಡೆ ನಿಲ್ಲುವುದಿಲ್ಲ ಎಂದು ಹೇಳಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಲು ನಾಲ್ಕು ವರ್ಷಗಳು ಬಾಕಿ ಉಳಿದಿದೆ. ಮುಂದೆ ಚುನಾವಣೆ ಬಗ್ಗೆ ಚಿಂತಿಸೋಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆದರೆ ಚಾಮುಂಡೇಶ್ವರಿ ಕ್ಷೇತ್ರದ ಋಣ ತಮಗೆ ಮುಗಿದಿದೆ ಎಂದು ಮೈಸೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಹೇಳಿದರು.