ಲೋಕಸಭಾ ಚುನಾವಣೆಯ ಒಂದು ಹಂತದ ಮತದಾನ ಪ್ರಕ್ರಿಯೆ ರಾಜ್ಯದಲ್ಲಿ ಪೂರ್ಣಗೊಂಡಿದೆ. ಇದೀಗ 2ನೇ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು, ಇದೇ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಸಚಿವ ದೇಶಪಾಂಡೆ ಅವರಿಗೆ ಹೊಸ ಜವಾಬ್ದಾರಿ ನೀಡಿದ್ದಾರೆ.
ಕಾರವಾರ: ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಗೆಲುವಿಗೆ ಸಚಿವ ದೇಶಪಾಂಡೆ ಅವರೇ ಜವಾಬ್ದಾರರು ಎಂದು ಹೇಳುವ ಮೂಲಕ ದೇಶಪಾಂಡೆಯವರನ್ನು ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸುವ ತಂತ್ರವನ್ನು ಮುಖ್ಯಮಂತ್ರಿ ಕುಮಾ ರಸ್ವಾಮಿ ಅನುಸರಿಸಿದ್ದಾರೆ.
Add Asianetnews Kannada as a Preferred Source

ಕುಮಟಾದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶಪಾಂಡೆ ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತಿದೆ. ಅವರು ಪ್ರಚಾರ ನಡೆಸುತ್ತಿದ್ದಾರೆ. ಆನಂದ್ ಗೆಲ್ಲಲಿದ್ದಾರೆ. ಆ ಗೆಲುವಿನಲ್ಲಿ ದೇಶಪಾಂಡೆ ಮಹತ್ತರ ಪಾತ್ರ ವಹಿಸಲಿದ್ದಾರೆ ಎಂದರು.
ಎರಡು ದಿನಗಳ ಹಿಂದೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರೂ ಹೀಗೆ ಹೇಳಿದ್ದರು.
