ಚುನಾವಣಾ ಪೂರ್ವದಲ್ಲಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಹೊಣೆ ಇದೀಗ ಸಿಎಂಗೆ ವಹಿಸಲಾಗಿದೆ.

ಭೋಪಾಲ್ : ವಿವಿಧ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಹೊಣೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ತಮ್ಮ ಆಪ್ತ ಮತ್ತು ಮಧ್ಯಪ್ರದೇಶ ಸಿಎಂ ಕಮಲ್‌ನಾಥ್ ಅವರಿಗೆ ವಹಿಸಿದ್ದಾರೆ ಎನ್ನಲಾಗಿದೆ. 

Add Asianetnews Kannada as a Preferred SourcegooglePreferred

ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಹೊರತಾಗಿಯೂ, ಎಲ್ಲಾ ಪಕ್ಷಗಳ ನಾಯಕರ ಜೊತೆ ಕಮಲ್‌ನಾಥ್ ಹಿಂದಿನಿಂದಲೂ ಉತ್ತಮ ಸಂಬಂಧ ಹೊಂದಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 300 ಸೀಟು : ಭವಿಷ್ಯ

ಜೊತೆಗೆ ಅವರು ಪಕ್ಷದ ಒಳಹೊರಗನ್ನೂ ಬಹಳ ಹಿಂದಿನಿಂದಲೂ ಬಲ್ಲವರು, ಚೌಕಾಶಿ ರಾಜಕೀಯದಲ್ಲಿ ಅವರದ್ದು ಎತ್ತಿದ ಕೈ. ಇದೇ ಕಾರಣಕ್ಕಾಗಿಯೇ ಕಮಲ್ ನಾಥ್‌ಗೆ ಈ ಹೊಣೆ ವಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.